ವಿಟ್ಲ : ಪಾದಚಾರಿ ಮಹಿಳೆಗೆ ಕಾರು ಡಿಕ್ಕಿ ಹೊಡೆದು ಹೊಂಡಕ್ಕಿಳಿದ ಘಟನೆ ವಿಟ್ಲದ ವೀರಕಂಭದಲ್ಲಿ ನಡೆದಿದೆ. ಘಟನೆಯಲ್ಲಿ ವೀರಕಂಭ ನಿವಾಸಿ ಐತ್ತಪ್ಪ ಗೌಡ ಎಂಬುವವರ ಪತ್ನಿ ಧರ್ಮಾವತಿ ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಧರ್ಮಾವತಿ ಅವರು ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಘಟನೆಯ ಬಳಿಕ ಕಾರು ಚಾಲಕ ಪರಾರಿ ಆಗಿದ್ದು, ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇರಾನ್ನ 45 ನಾವಿಕರ ಮೃತದೇಹ ಹಸ್ತಾಂತರ
ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದ 45 ನಾವಿಕರ ಮೃತದೇಹಗಳನ್ನು ಶ್ರೀಲಂಕಾ ಸರ್ಕಾರವು ಇರಾನ್ ರಾಯಭಾರ ಕಚೇರಿಗೆ ಹಸ್ತಾಂತರಿಸಿದೆ. ಈ ಘಟನೆ ಹಿಂದೂ...








