ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾರುತಿ ಸ್ವಿಫ್ಟ್ ಕಾರು ಮತ್ತು ಕೆಎಸ್.ಅರ್.ಟಿ.ಸಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡ ಕಾರು ಚಾಲಕ ಮೃತಪಟ್ಟ ಘಟನೆ ಮಾ.8ರಂದು ರಾತ್ರಿ ನಡೆದಿದೆ.
ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರು, ಇಲ್ಲಿನ ಸಿಟಿ ಲ್ಯಾಂಡ್ ಎದುರಿನ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದು ಕಡಬಕ್ಕೆ ಹೋಗುತ್ತಿದ್ದ ಕೆಎಸ್.ಅರ್.ಟಿ.ಸಿ ಬಸ್ ಗೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ದಯೇಶ್ (26ವ) ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ.
ಪುತ್ತೂರಿನ ಮೂಕಾಂಬಿಕಾ ಗ್ಯಾಸ್ ವಿತರಣಾ ಸಂಸ್ಥೆಯಲ್ಲಿ ಚಾಲಕರಾಗಿದ್ದ ದಯೇಶ್ ಸೋಮವಾರ ಕರ್ತವ್ಯ ನಿರ್ವಹಿಸಲೆಂದು ತನ್ನ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ನಾಯಕರ ಮುಂದೆ ಗ್ಲಾಮರಸ್ ಆಗಿ ಕಾಣಲು ಹೋಗಬೇಡಿ: ಮೋಟಮ್ಮ ಖಡಕ್ ವಾರ್ನಿಂಗ್
ಮಂಗಳೂರು: ರಾಜಕೀಯದಲ್ಲಿ ಮಹಿಳೆಯರ ಸ್ಥಾನಮಾನ, ನಡವಳಿಕೆ ಹಾಗೂ ಪ್ರಸ್ತುತ ಸಮಾಜದಲ್ಲಿ ಹೆಣ್ಣುಮಕ್ಕಳ ಪಾಲನೆ ಕುರಿತಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಮೋಟಮ್ಮ ಅವರು ನೀಡಿರುವ ಹೇಳಿಕೆ ಈಗ...








