ಮುದ್ದೇಬಿಹಾಳದಲ್ಲಿ ಕಾರು ಅಪಘಾತ | ಒಬ್ಬರು ಸಾವು, 6 ಮಂದಿಗೆ ಗಾಯ
ವಿಜಯಪುರ : ಎರಡು ಕಾರುಗಳ ಮಧ್ಯೆ ಅಪಘಾತ ಸಂಭವಿಸಿ ಮಹಿಳೆ ಸಾವನ್ನಪ್ಪಿ, ಆರು ಮಂದಿ ಗಾಯಗೊಂಡಿರುವ ಘಟನೆ ಮುದ್ದೇಬಿಹಾಳದ ಹೊಕ್ರಾಣಿ ಕ್ರಾಸ್ ಬಳಿ ಹುನಗುಂದ-ಮುದ್ದೇಬಿಹಾಳ-ತಾಳಿಕೋಟೆ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಚಿತ್ರದುರ್ಗ ಜಿಲ್ಲೆ ಹಿರಿಯೂರು ನಿವಾಸಿ ದೀಪಾ ವೆಂಕಟೇಶ ಶಿವಣಗಿ (31) ಎಂದು ಗುರುತಿಸಲಾಗಿದೆ.
ಅದೇ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸದ್ಯ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಕಾರುಗಳನ್ನಿ ರಸ್ತೆ ಪಕ್ಕಕ್ಕೆ ಸರಿಸಿ. ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.