ಮಹೇಂದ್ರ ಕುಮಾರ್ ನಿರ್ದೇಶನದ ತುಳು ಸಿನಿಮಾ ಕಾರ್ನಿಕದ ಕಲ್ಲುರ್ಟಿ ಏಪ್ರಿಲ್ 3 ರಂದು ತೆರೆಕಾಣಲಿದೆ. ಫೆನೋಕ್ಸ್ ಫಿಲ್ಮ್ಸ್ ಬ್ಯಾನರ್ನಡಿಯಲ್ಲಿ ಮೂಡಿ ಬಂದಿರುವ ಈ ಸಿನಿಮಾವು ಕಲ್ಲುರ್ಟಿ ದೈವದ ಕಥೆಯಾಗಿದೆ. ಚಿತ್ರಕ್ಕೆ ನಿರ್ದೇಶಕ ಮಹೇಂದ್ರ ಕುಮಾರ್ ಅವರೇ ಕಥೆ ಬರೆದಿದ್ದು, ಗಂಗಾಧರ್ ಕಿರೋಡಿಯನ್ ಅವರು ಸಂಭಾಷಣೆ ಹಾಗೂ ಹಾಡುಗಳಿಗೆ ಸಾಹಿತ್ಯ ನೀಡಿದ್ದಾರೆ. ಹಿತೇನ್ ಹಾಸನ್ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಶೈಲೇಂದ್ರ ಡಿ.ಜೆ. ಚಾಂದಿನಿ ಅಂಚನ್, ಮಹೇಂದ್ರ ಕುಮಾರ್, ಶಾಲಿನಿ ಮರ್ಕಡ ಹಾಗೂ ಮೊದಲಾದ ಕಲಾವಿದರು ಈ ಸಿನಿಮಾದಲ್ಲಿದ್ದಾರೆ.
ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...








