ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕ್ಯಾಶ್ಯೂ ಇಂಡಿಯಾ ಆಪ್; ಬೆಳೆ ಸಂಬಂಧಿ ಆಪ್ ತಯಾರಿಕೆಯಲ್ಲಿ ವಿನೂತನ ಹೆಜ್ಜೆ

admin by admin
July 31, 2020
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಕ್ಯಾಶ್ಯೂ ಇಂಡಿಯಾ ಆಪ್; ಬೆಳೆ ಸಂಬಂಧಿ ಆಪ್ ತಯಾರಿಕೆಯಲ್ಲಿ ವಿನೂತನ ಹೆಜ್ಜೆ:

ನಮ್ಮ ಪುತ್ತೂರಿನ ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರ “ಕ್ಯಾಶ್ಯೂ ಇಂಡಿಯಾ (Cashew India)” ಆಪ್ ನ್ನು ಗೇರು ಕೃಷಿಕರು ಹಾಗೂ ಗೇರಿಗೆ ಸಂಬಂಧಿಸಿದ ಸಮಗ್ರ ಮಾಹಿತಿ ಸಹಿತ ಅಭಿವೃದ್ಧಿಗೊಳಿಸಲಾಗಿದೆ. ಗೂಗಲ್ ಪ್ಲೇಸ್ಟೋರಿನಲ್ಲಿ ಲಭ್ಯವಿರುವ ಇದು ಕೃಷಿ ಆಸಕ್ತರೆಲ್ಲರೂ ನೋಡಲೇಬೇಕಾದ ಅನನ್ಯ ಆಪ್. ಬೆಳೆ ಸಂಬಂಧೀ ಆಪ್ಸ್ ತಯಾರಿಕೆಯಲ್ಲಿ ಇದೊಂದು ಮಾದರಿಯಾಗಬಲ್ಲ ವಿನೂತನ ಹೆಜ್ಜೆ ಎಂಬ ಭರವಸೆ ಹುಟ್ಟಿಸಿದೆ. ಸುಮಾರು ಒಂದು ವರ್ಷದ ಹಲವರ ಶ್ರಮ ಇದರ ಹಿಂದಿದೆ.

Related posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

March 31, 2026
EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

March 31, 2026

‘ಕೃಷಿಕ ಸ್ನೇಹಿ’, ‘ಸಮಗ್ರ ಮಾಹಿತಿ’, ‘ಸುಲಭ ಬಳಕೆ’ ‘ದೇಶವ್ಯಾಪಿ‘ ಮಾನದಂಡಗಳನ್ನಿಟ್ಟುಕೊಂಡು ರೂಪಿಸಿದ ಈ ‘ಕ್ಯಾಶ್ಯೂ ಇಂಡಿಯಾ’ ಆಪ್ ನ ಹಲವು ವೈಶಿಷ್ಟ್ಯಗಳು ಇಲ್ಲಿವೆ.

1. ಗೇರು ಕಸಿಗಿಡಗಳು, ನರ್ಸರಿ, ಕೃಷಿ, ಕೀಟ ಮತ್ತು ರೋಗ ನಿರ್ವಹಣೆ, ಕೊಯ್ಲೋತ್ತರ ಸಂಸ್ಕರಣೆ, ಮಾರುಕಟ್ಟೆ ಮಾಹಿತಿ, ಇ-ಮಾರುಕಟ್ಟೆ, ಗೇರಿಗೆ ಸಂಬಂಧಪಟ್ಟ ಕೃಷಿಕರು, ಸಂಶೋಧಕರು, ಅಭಿವೃದ್ಧಿ ಇಲಾಖೆಗಳು, ಸಂಸ್ಕರಣಾ ಘಟಕಗಳು ಇವೆಲ್ಲದರ ಮಾಹಿತಿಯನ್ನು ಒಂದೆಡೆ ಕೊಡುವ ಪ್ರಯತ್ನ.

2. ಕೃಷಿಕ/ಬಳಕೆದಾರ ತನ್ನ ಗೇರು ತೋಟದ ಛಾಯಾಚಿತ್ರ ಹಾಗೂ ವೀಡಿಯೋಗಳನ್ನು ‘ಕೃಷಿ’ ವಿಭಾಗದಲ್ಲಿರುವ ಉಪವಿಭಾಗ ‘ನನ್ನ ಗೇರು ಬೆಳೆ’ ಯಡಿಯಲ್ಲಿ ಸಂಗ್ರಹಿಸಿಡಬಹುದು. ಆಯಾ ತೋಟದ ಖರ್ಚು-ವೆಚ್ಚ ಹಾಗೂ ತನ್ನ ಅನುಭವಗಳನ್ನು ಇಲ್ಲಿ ಸುಲಭವಾಗಿ ದಾಖಲಿಸಲು ಸಾಧ್ಯ.

3. ಈ ಆಪ್ ಮೂಲಕ ಆಯಾ ರಾಜ್ಯದಲ್ಲಿರುವ ಸಂಶೋಧನಾ ಕೇಂದ್ರಗಳಲ್ಲಿ ನಿಮಗೆ ಬೇಕಾದ ಗೇರು ಕಸಿಗಿಡಗಳನ್ನು ಬುಕ್ ಮಾಡಬಹುದು.

4. ಇಲ್ಲಿರುವ ‘ಮಾರುಕಟ್ಟೆ ಮಾಹಿತಿ’ ವಿಭಾಗದಲ್ಲಿ ನೀವು ಗೇರು ಉತ್ಪನ್ನಗಳನ್ನು ಕೊಡು/ಕೊಳ್ಳುವುದು ಸಾಧ್ಯ.

5. ಈ ಆಪ್ ನ್ನು ಗೇರು ಬೆಳೆಯುವ ೧೦ ರಾಜ್ಯಗಳಿಗೆ – ಗುಜರಾತ್, ಮಹಾರಾಷ್ಟ್ರ, ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಛತ್ತೀಸ್ ಘಡ, ಒರಿಸ್ಸ, ಪಶ್ಚಿಮ ಬಂಗಾಳ ಹಾಗೂ ಮೇಘಾಲಯ- ಅನುಕೂಲವಾಗುವಂತೆ ರೂಪಿಸಿದ್ದೇವೆ. ಇಷ್ಟು ರಾಜ್ಯಗಳಿಗೆ ಮಾಹಿತಿ ಕೊಡುವ ಆಪ್ ನಮ್ಮ ಗಮನಕ್ಕೆ ಇದುವರೆಗೆ ಬಂದಿಲ್ಲ.

6. ಹಿಂದಿ, ಆಂಗ್ಲ, ಕನ್ನಡ, ಮರಾಠಿ, ಗುಜರಾತಿ, ಮಲಯಾಳಂ, ತಮಿಳು, ತೆಲುಗು, ಒಡಿಯಾ, ಗಾರೋ ಹಾಗೂ ಬೆಂಗಾಲಿ – ಹೀಗೆ ೧೧ ಭಾಷೆಗಳಲ್ಲಿ ಪ್ರತ್ಯೇಕವಾಗಿ ಮಾಹಿತಿ ಲಭ್ಯ. ಒಂದು ರಾಜ್ಯಕ್ಕೆ ಎರಡು ಭಾಷೆ – ಇಂಗ್ಲೀಷ್ ಮತ್ತು ಅಲ್ಲಿನ ಸ್ಥಳೀಯ ಭಾಷೆ. ಇಷ್ಟು ಭಾಷೆಗಳಲ್ಲಿ ಮಾಹಿತಿ ಕೊಡುವ ಆಪ್ ಇದು ಮೊದಲಿರಬಹುದು!

7. ಕೃಷಿಕ/ಬಳಕೆದಾರ ‘ತಜ್ಜರನ್ನು ಕೇಳಿ’ ವಿಭಾಗದ ಮೂಲಕ ಬೇಕಾದ ಸಂಪನ್ಮೂಲ ವ್ಯಕ್ತಿಗಳನ್ನು ಸಂಪರ್ಕಿಸಲು ಸಾಧ್ಯ.

8. ‘ಚರ್ಚಾ ಕೋಣೆ’ ಯ ಮೂಲಕ ಆಯಾ ಸಮಯದಲ್ಲಿ ಆಪ್ ಬಳಸುತ್ತಿರುವ ಬಳಕೆದಾರರೊಡನೆ ನೀವು ಸಂವಹನ ನಡೆಸಬಹುದು.

9. ಅಲ್ಲಲ್ಲಿ ಲಭ್ಯವಿರುವ ಇ-ಸ್ಪೀಕ್ ಗುಂಡಿಯನ್ನು ಒತ್ತಿದರೆ, ಅಲ್ಲಿರುವ ಬರಹಗಳ ಧ್ವನಿರೂಪವನ್ನು ಆಪ್ ಓದುತ್ತದೆ

ಆಪ್ ನ ಹಿಂದಿರುವ ಪರಿಣಿತರು:

ಪರಿಕಲ್ಪನೆ, ವಿನ್ಯಾಸ ಮತ್ತು ನಿರ್ವಹಣೆ : ಡಾ. ಮೋಹನ್ ತಲಕಾಲುಕೊಪ್ಪ, ಹಿರಿಯ ವಿಜ್ಞಾನಿ, ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರ, ಪುತ್ತೂರು

ತಾಂತ್ರಿಕ ಮಾಹಿತಿ : ವಿಜ್ಞಾನಿಗಳು, ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರ, ಪುತ್ತೂರು ಹಾಗೂ ವಿಜ್ಞಾನಿಗಳು, ಅಖಿಲ ಭಾರತ ಸಮನ್ವಿತ ಗೇಋ ಸಂಶೋಧನಾ ಪ್ರಾಯೋಜನೆಯ ಕೇಂದ್ರಗಳು

ಮಾಹಿತಿ ಸಂಗ್ರಹ ,ಪರಿಷ್ಕರಣೆ ಮತ್ತು ನಿರ್ವಹಣೆ:
ಡಾ. ಮೋಹನ್ ತಲಕಾಲುಕೊಪ್ಪ, ಶ್ರೀ ಮುತ್ತುರಾಜು (ತಾಂತ್ರಿಕಾಧಿಕಾರಿ), ಹಾಗೂ
ಡಾ. ಎಂ. ಜಿ ನಾಯಕ್

ಪ್ರಕಟಣೆ: ಡಾ. ಎಂ.ಜಿ. ನಾಯಕ್, ನಿರ್ದೇಶಕರು (ಪ್ರಭಾರ) ಹಾಗೂ ಪ್ರಧಾನ ವಿಜ್ಞಾನಿ (ತೋಟಗಾರಿಕೆ), ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರ, ಪುತ್ತೂರು

ತಂತ್ರಾಂಶ ಅಭಿವೃದ್ಧಿ: ಮಾರ್ಕೆಟಿಂಗ್ ಮೈಂಡ್ಸ್, ಜೈಪುರ, ರಾಜಸ್ತಾನ

ಆರ್ಥಿಕ ನೆರವು: ತೋಟಗಾರಿಕೆಯ ಸಮಗ್ರ ಅಭಿವೃದ್ಧಿ ಮಿಷನ್, ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ, ನವದೆಹಲಿ ಮತ್ತು ಡಾ. ವೆಂಕಟೇಶ್ ಹುಬ್ಬಳ್ಳಿ, ನಿರ್ದೇಶಕರು, ಗೇರು ಮತ್ತು ಕೊಕೊ ಅಭಿವೃದ್ಧಿ ನಿರ್ದೇಶನಾಲಯ, ಕೊಚ್ಚಿನ್.

ದಯವಿಟ್ಟು ಗಮನಿಸಿ: ಈಗ ಹೊರಬಂದಿರುವುದು ಮೊದಲ ಆವೃತ್ತಿ. ಹಾಗಾಗಿ. ಇದರಲ್ಲಿ ಇನ್ನೂ ಹಲವಾರು ವಿಷಯಗಳನ್ನು ಸುಧಾರಿಸಬೇಕಿದೆ. ಜೊತೆಗೆ ಈ ಕಿರುತಂತ್ರಾಂಶ ಬಳಸಲು ಅಂತರ್ಜಾಲ ಸಂಪರ್ಕ ಅತೀ ಅಗತ್ಯ. ಇದಿಲ್ಲದೆ ಮಾಹಿತಿ ಕೊಡುವಂತೆ ಮಾಡಲು ಪ್ರಸಕ್ತ ಕೆಲವು ತಂತ್ರಜ್ಞಾನದ ತೊಡಕುಗಳಿವೆ. ಮುಂದಿನ ದಿನಗಳಲ್ಲಿ ಇವು ಸರಿಹೋಗಬಹುದು.

 

 

ಡೌನ್ಲೋಡ್ ಮಾಡಿಕೊಳ್ಳುವ ಲಿಂಕ್ – https://play.google.com/store/apps/details?id=com.cashew.icar&hl=en_IN

ಮಾಹಿತಿ ಮತ್ತು ಲೇಖನ: – ಡಾ. ಮೋಹನ್ ತಲಕಾಲುಕೊಪ್ಪ , 9902273468 mohangs2007@gmail.com

Tags: cashewCashew India appkarnatakamangaluruNational Cashew Research Centeputturu
ShareTweetSendShare
Join us on:

Related Posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

by Shwetha
March 31, 2026
0

ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

by Shwetha
March 31, 2026
0

ಕೇಂದ್ರ ಸರ್ಕಾರವು ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ಹಿಂದೆಂದೂ ಕೇಳಿರದಂತಹ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ನೌಕರರ ಭವಿಷ್ಯ ನಿಧಿ ಸಂಘಟನೆ ಅಂದರೆ ಇಪಿಎಫ್ಒ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಯೊಂದು ನಡೆಯಲಿದ್ದು,...

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

by Shwetha
March 31, 2026
0

ಇಂದಿನ ಡಿಜಿಟಲ್ ಮತ್ತು ವೇಗದ ಯುಗದಲ್ಲಿ ವಾಹನ ಚಾಲನೆ ಮಾಡುವುದು ಎಷ್ಟು ಸುಲಭವೋ, ಅಷ್ಟೇ ಎಚ್ಚರಿಕೆಯಿಂದ ಇರುವುದು ಕೂಡ ಅಗತ್ಯವಾಗಿದೆ. ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರು ಕಾಣುತ್ತಿಲ್ಲ, ನಾವೇನಾದರೂ...

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಇತಿಹಾಸ ಮತ್ತು ಪರಂಪರೆಯ ಸೂಕ್ಷ್ಮ ವಿಚಾರಗಳನ್ನೇ ಅಸ್ತ್ರವಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ಆರ್ ಎಸ್...

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

by Shwetha
March 31, 2026
0

ಬಡವರ ಹಸಿವು ನೀಗಿಸಲು ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram