ಬೆಂಗಳೂರು: ಜಾತಿ ಜನಗಣತಿ ವರದಿ (Caste Census Report) ಜಾರಿಯಾಗಬೇಕು ಎಂದು ರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ (B.K.Hariprasad) ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಶುಕ್ರವಾರ ಸಿಎಂ ಸಿದ್ದರಾಮಯ್ಯ (Siddaramaiah) ಅವರನ್ನು ಭೇಟಿಯಾಗಿದ್ದೆ. ಅ.7ರಂದು ಹಿಂದುಳಿದ ವರ್ಗಗಳ ಹಾಲಿ ಹಾಗೂ ಮಾಜಿ ಶಾಸಕರು ಭೇಟಿಯಾಗಿ ಜಾತಿಗಣತಿ ವರದಿ ಜಾರಿಗೆ ಒತ್ತಾಯಿಸಿದ್ದೆವು. ಆಗ ಕ್ಯಾಬಿನೆಟ್ ಗೆ ತಂದು ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಕೆಲ ಸಮುದಾಯದ ಮುಖಂಡರು ವಿರೋಧ ಮಾಡಿದ್ದಾರೆ. ಈ ಕುರಿತು ಭಾನುವಾರ ಎರಡು ಸಮುದಾಯಗಳ ಸಭೆ ಕರೆದಿದ್ದೇನೆ. ಈಗ ಉಪ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿದೆ. ಈ ಹಂತದಲ್ಲಿ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದರು ಎಂದಿದ್ದಾರೆ.
ಮುಡಾ ಕಚೇರಿ ಮೇಲೆ ಇ.ಡಿ ದಾಳಿ ವಿಚಾರವಾಗಿ, ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಇ.ಡಿ ಹಾಗೂ ಸಿಬಿಐ ದುರುಪಯೋಗವಾಗುತ್ತಿದೆ. ಇ.ಡಿ ಒಂದು ರೀತಿ ವಾಷಿಂಗ್ ಮಷಿನ್ ಇದ್ದಂತೆ. ಕರೆದುಕೊಂಡು ಹೋಗಿ ರುಬ್ಬಿ ಬಾಯ್ಬಿಡಿಸಿ ಕಳಿಸುತ್ತಾರೆ. ಈಗ ಅಂತಹವರು ಯಾರೂ ಇಲ್ಲ. ಇ.ಡಿ ದಾಳಿ ಮಾಡಬೇಕಿರೋದು ಪ್ರಹ್ಲಾದ್ ಜೋಶಿಯವರ ಮನೆ ಮೇಲೆ. 2 ಕೋಟಿ ರೂ. ಆರೋಪ ಎದುರಾಗಿದೆ ಎಂದಿದ್ದಾರೆ.