ದನದ ಕೊಟ್ಟಿಗೆಗೆ ಬೆಂಕಿ ಬಿದ್ದ ಪರಿಣಾಮ 9 ಹಸುಗಳು(Cows) ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಬೆಂಗಳೂರು (Bengaluru) ಹೊರವಲಯದ ಹುಲಿಮಂಗಲ ಗ್ರಾಮದಲ್ಲಿ ನಡೆದಿದೆ. ಕೊಟ್ಟಿಗೆಯೊಂದರಲ್ಲಿ ಸುಮಾರು 15 ಹಸುಗಳನ್ನು ಕಟ್ಟಲಾಗಿತ್ತು. ಅಲ್ಲದೇ, 2 ಬೈಕ್ ಗಳನ್ನು ಕೂಡ ನಿಲ್ಲಿಸಲಾಗಿತ್ತು.
ಆದರೆ, ತಡರಾತ್ರಿ ಕೊಟ್ಟಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹಸುಗಳು ಹಾಗೂ ಬೈಕ್ ಗಳು ಸುಟ್ಟು ಕರಕಲಾಗಿವೆ. ಇನ್ನುಳಿದ ಹಸುಗಳ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪಶುವೈದ್ಯರ ತಂಡ ಹಾಗೂ ಜಿಗಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.