ಮುಂಗಾರು ಮಳೆಯ ಕೊರತೆಯಿಂದಾಗಿ ಅಂತರರಾಜ್ಯಗಳ ನಡುವಿನ ಜಲವಿವಾದ ಮತ್ತೆ ಶುರುವಾಗಿದೆ. ಕಾವೇರಿ ನದಿ ನೀರು ಹರಿಸಲು ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ಕೋರಿ ತಮಿಳುನಾಡು ಸುಪ್ರೀಂಕೋರ್ಟ್ ಮೊರೆ ಹೋಗಿದೆ.
ಕೆಆರ್ಎಸ್ ಜಲಾಶಯ ಮಳೆಯ ಕೊರತೆಯ ಹಿನ್ನೆಲೆಯಲ್ಲಿ ಭರ್ತಿಯಾಗಿಲ್ಲ. ಆದರೆ ಡ್ಯಾಂನಿಂದ 15,576 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ತಮಿಳುನಾಡು ಸರ್ಕಾರ ಜೂನ್, ಜುಲೈ ಮತ್ತು ಆಗಸ್ಟ್ ತಿಂಗಳ ನೀರು ಬಿಡುಗಡೆಗಾಗಿ ಮನವಿ ಮಾಡುತ್ತಿದೆ. ಡ್ಯಾಂನಲ್ಲಿ ಪ್ರಸ್ತುತ 29.43 ಟಿಎಂಸಿ ಅಡಿ ನೀರಿನ ಸಂಗ್ರಹವಿದೆ. ನೀರಿನ ಕೊರತೆಯ ನಡುವೆಯೇ ತಮಿಳುನಾಡು ತನ್ನ ಪಾಲು ಕೇಳುತ್ತಿರುವುದು ವಿವಾದಕ್ಕೆ ಕಾರಣವಾಗಿದೆ.
ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ತಮಿಳುನಾಡು ಕಾವೇರಿ ನೀರಿಗಾಗಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿರುವ ವಿಚಾರದ ಕುರಿತು ಚರ್ಚಿಸಿದೆ.