ಬೆಂಗಳೂರಿನ ಈ ಪ್ರದೇಶಗಳಲ್ಲಿ ಕಾವೇರಿ ನೀರು ಬಂದ್
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಕೆಲ ಪ್ರದೇಶಗಳಲ್ಲಿ ಕಾವೇರಿ ನೀರು ಬಂದ್ ಆಗಲಿದೆ.
ಈ ಬಗ್ಗೆ ಜಲಮಂಡಳಿ ಪ್ರಕಟಣೆ ಹೊರಡಿಸಿದ್ದು, ಗುರುವಾರ ಬೆಳಗ್ಗೆ 10 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಮಲ್ಲೇಶ್ವರಂ, ಯಶವಂತಪುರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಐಟಿಸಿ ಹೋಟೆಲ್, ವಿಂಡ್ಸರ್ ಮ್ಯಾನರ್ ಸೇತುವೆ ಸಮೀಪ ಹಾದುಗೋಗಿರುವ ಹೆಚ್ ಜಿಆರ್ ನಿಂದ ಸಿಜೆಎಫ್ ನೆಲಮಟ್ಟದ ಜಲಾಗಾರಕ್ಕೆ ನೀರು ಪೂರೈಕೆಯಾಗುತ್ತಿರುವ 900 ಮಿಮೀ ವ್ಯಾದ ಕೊಳವೆ ಮಾರ್ಗಕ್ಕೆ ಎಲೆಕ್ಟೋ ಮ್ಯಾಗ್ನಿಕ್ ಪ್ಲೋ ಮೀಟರ್ ಅಳವಡಿಸುವ ಕಾಮಗಾರಿಯನ್ನು ಕೈಗೆತ್ತಿಗೊಳ್ಳು ಉದ್ದೇಶಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ಮಲ್ಲೇಶ್ವರಂ ಮತ್ತು ಯಶವಂತಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯಾವಾಗಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಲಿ ಪ್ರಕಟಿಸಿದೆ.