ಬೆಳಗಾವಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ಅಧಿಕಾರಿಗಳ ದಾಳಿ ನಡೆಸಿದ್ದು, ಇದು ಡಿಕೆಶಿಯನ್ನು ಕಟ್ಟಿ ಹಾಕುವ ಪ್ರಯತ್ನ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿಕಾರಿದ್ದಾರೆ.
ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ರಾಜಕೀಯ ದುರುದ್ದೇಶದಿಂದ ನಡೆದಿರುವ ದಾಳಿಯಾಗಿದೆ.
ರಾಜ್ಯ ಸರ್ಕಾರ ಯಾವಾಗಲೋ ಅನುಮತಿ ನೀಡಿತ್ತು. ಆದರೆ ಉಪ ಚುನಾವಣೆ ಬಂದಾಗಲೇ ದಾಳಿ ಮಾಡಲಾಗಿದೆ. ಇಡಿ ಆಯ್ತು, ಸಿಬಿಐ, ಐಟಿ ಆಯ್ತು ಈಗ ಮತ್ತೆ ಸಿಬಿಐ ದಾಳಿ ಮಾಡಿದ್ದಾರೆ.
ನಮ್ಮ ನಾಯಕರು ಸಮರ್ಥರು ಇದ್ದಾರೆ. ಅವರು ಹ್ಯಾಂಡಲ್ ಮಾಡುತ್ತಾರೆ. ಅಹ್ಮದ್ ಪಾಟೇಲ್ ರ ಚುನಾವಣೆಯಲ್ಲೂ ದಾಳಿ ಮಾಡಿದರು. ಇದೀಗ ಮತ್ತೆ ದಾಳಿ ಮಾಡಿದ್ದಾರೆ ಎಂದು ಗರಂ ಆದರು.
ಇದನ್ನೂ ಓದಿ : ಡಿಕೆ ಬ್ರದರ್ಸ್ಗೆ ಸಿಬಿಐ ಶಾಕ್: ದುಷ್ಟತನದ ಪರಮಾವಧಿ ಎಂದ ಸಿದ್ದರಾಮಯ್ಯ..!
ಸಿಬಿಐ ದಾಳಿ ಮಾಡಲು ಪೂರಕ ದಾಖಲೆಗಳು ಇದ್ದರೆ ಅವತ್ತೇ ದಾಳಿ ಮಾಡಬೇಕಿತ್ತು ಎಂದು ಲಕ್ಷ್ಮಿ ಹೆಬ್ಬಾಳ್ಕರ್, ಇದು ಡಿಕೆಶಿಯನ್ನು ಕಟ್ಟಿ ಹಾಕಲು ಪ್ರಯತ್ನ.
ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರು ಎಲ್ಲೆಲ್ಲಿ ಧ್ವನಿ ಎತ್ತುತ್ತಾರೆಯೋ, ಅವರನ್ನ ಹತ್ತಿಕ್ಕುವ ಪ್ರಯತ್ನ ಮಾಡುತ್ತಾ ಇದ್ದಾರೆ.
ನಮ್ಮ ನಾಯಕರು ಸರ್ಮರ್ಥರು ಇದ್ದಾರೆ. ಅವರು ಕಾನೂನಿನಡಿಯಲ್ಲಿ ಹೋರಾಟ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.