ಕೊರೋನಾ ಭೀತಿ ಹಿನ್ನೆಲೆಯಲ್ಲಿ ಹಳೆ ಮೈಸೂರು ಭಾಗದ ಸಿಬಿಎಸ್’ಸಿ ಶಾಲೆಗಳ ಎಲ್.ಕೆ.ಜಿ, ಯು.ಕೆ.ಜಿ, 1 ರಿಂದ 4ನೇ ತರಗತಿ ಮಕ್ಕಳಿಗೆ ಪರೀಕ್ಷೆ ರದ್ದುಗೊಳಿಸಿ ಮುಂದಿನ ತರಗತಿಗೆ ತೇರ್ಗಡೆ ಮಾಡಲು ನಿರ್ಧರಿಸಲಾಗಿದೆ. 5 ರಿಂದ 9ನೇ ತರಗತಿಯ ವರೆಗಿನ ಮಕ್ಕಳಿಗೆ ಪ್ರಿಪರೇಟರಿ ಪರೀಕ್ಷೆಯನ್ನೇ ಅಂತಿಮ ಪರೀಕ್ಷೆಯನ್ನಾಗಿ ಪರಿಗಣಿಸುವ ನಿರ್ಧಾರ ಮಾಡಲಾಗಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು ಜಿಲ್ಲೆಗಳ ಖಾಸಗಿ ಸಿಬಿಎಸ್ಸಿ ಶಾಲೆಗಳ ಒಕ್ಕೂಟ ಈ ನಿರ್ಧಾರ ಕೈಗೊಂಡಿದ್ದು, 5 ಜಿಲ್ಲೆಗಳ 240 ಸಿಬಿಎಸ್ಸಿ ಶಾಲೆಗಳಿಂದ ಒಪ್ಪಿಗೆ ಸಿಕ್ಕಿದೆ.
ಕೊರೋನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಾರ್ಚ್ 20ರ ಒಳಗೆ ಕಡ್ಡಾಯವಾಗಿ ರಜೆ ಘೋಷಣೆ ಮಾಡುವಂತೆ ಹಾಗೂ ಯಾವುದೇ ಬೇಸಿಗೆ ಶಿಬಿರಕ್ಕೆ ಮಕ್ಕಳನ್ನು ಸೇರಿಸದಂತೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಬಿಎಸ್ಸಿ ಖಾಸಗಿ ಶಾಲೆಗಳ ಒಕ್ಕೂಟ ಅಧ್ಯಕ್ಷ ಸುಧಾಕರ್ ಶೆಟ್ಟಿ ತಿಳಿಸಿದ್ದಾರೆ.
ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?
ಸಂಜು ಸ್ಯಾಮ್ಸನ್.. ಹೌದು.. ದೇವರ ನಾಡಿನ ಹುಡುಗನ ಕ್ರಿಕೆಟ್ ಪಯಣದಲ್ಲಿವೆ ಹಲವು ಸ್ಪೂರ್ತಿದಾಯಕ ಕಥೆಗಳು..! ಅವಮಾನ, ಅಪಮಾನಗಳೇ ಇವರ ಯಶಸ್ಸಿನ ಮೆಟ್ಟಿಲು...! ಮೌನ ಕ್ರಾಂತಿಯಿಂದಲೇ ತನ್ನ ಹೆಸರಿಗೆ...








