ಸಿಡಿ ಕೇಸ್ : ಶೀಘ್ರದಲ್ಲೇ ಸತ್ಯ ಹೊರಬರಲಿದೆ – ಬೊಮ್ಮಯಿ..!
ಬೆಂಗಳೂರು : ಸಿಡಿ ಲೇಡಿ ಅಗ್ಞಾತ ಸ್ಥಳದಿಂದ ಮತ್ತೊಂದು ವಿಡಿಯೋ ರಿಲೀಸ್ ಮಾಡಿದ್ದು, ರಮೇಶ್ ಜಾರಕಿಹೊಳಿ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಹೇಳಿಕೊಂಡಿದ್ದಾರೆ. ಇದಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದು, ಸಿಡಿ ಪ್ರಕರಣದ ಸತ್ಯಸತ್ಯಾತೆ ಶೀಘ್ರದಲ್ಲೇ ಹೊರಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಲ್ಲದೇ ಈಗಾಗಲೇ ಎಸ್ ಐಟಿ ಅಧಿಕಾರಿಗಳ ತಮಡ ರಚನೆಯಾಗಿದ್ದು, ಪ್ರಕರಣ ಕುರಿತಾಗಿ ಸಾಕಷ್ಟು ಮಾಹಿತಿಯನ್ನು ಕಲೆಹಾಕಿದ್ದಾರೆ. ಸದ್ಯದಲ್ಲೇ ಪ್ರಕರಣ ಸುಖಾಂತ್ಯ ಕಾಣಲಿದೆ ಎಂದು ಹೇಳಿದ್ದಾರೆ.
ಇದೇ ವೇಳೆ SIT ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿದ್ದು, ಇದರಲ್ಲಿ ನಾನಾಗಲಿ ಅಥವಾ ಸರ್ಕಾರವಾಗಲಿ ಎಲ್ಲಿಯೂ ಕೂಡ ಹಸ್ತಕ್ಷೇಪ ಮಾಡಿಲ್ಲ. ಅವರಿಗೆ ಮುಕ್ತ ಮತ್ತು ನ್ಯಾಯಸಮ್ಮತವಾಗಿ ತನಿಖೆ ನಡೆಸಲು ಸೂಚನೆ ಕೊಟ್ಟಿದ್ದೇವೆ. ರಾಜ್ಯದ ಜನತೆಗೆ ಸತ್ಯಾಸತ್ಯತೆ ತಿಳಿಯಬೇಕೆಂಬುದು ಇದರ ಉದ್ದೇಶ ಎಂದು ಸ್ಪಷ್ಟಪಡಿಸಿದರು.
ಅತ್ತೆ ನಾದಿನಿಯನ್ನ ಕೊಂದ ಈತನಿಗೆ ಸದ್ದಾಂ ಹುಸೇನ್ ಸ್ಪೂರ್ತಿಯಂತೆ..!
ಬಿಎಸ್ ವೈ ನೇತೃತ್ವದ ಸರ್ಕಾರದ ವಿರುದ್ಧ ಭೀಷ್ಮ ಪ್ರತಿಜ್ಞೆ ಮಾಡಿದ ಯತ್ನಾಳ್..!








