ಸಿಡಿ ಪ್ರಕರಣ: ಸತ್ಯ ಏನೆಂಬುದು ರಾಜ್ಯದ ಜನರಿಗೆ ಬೇಗನೇ ಗೊತ್ತಾಗುತ್ತೆ – ವಿಜಯೇಂದ್ರ
ಚಿತ್ರದುರ್ಗ : ಬಿಜೆಪಿ ರಾಜ್ಯ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಚಿತ್ರದುರ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ನಳೀನ್ ಕುಮಾರ್ ಕಟೀಲ್ ಅವರು ಕೊವೀಡ್ ಸಮಯದಲ್ಲಿ ಮೂರು ರಾಜ್ಯ ಪ್ರವಾಸ ಮಾಡಿದ್ದಾರೆ. ಅಧ್ಯಕ್ಷ ಸ್ಥಾನದ ಬದಲಾವಣೆ ಪ್ರಶ್ನೆಯೇ ಇನ್ನೂ ಉದ್ಭವವಾಗಿಲ್ಲ ಎಂದಿದ್ದಾರೆ.
ಸಿಡಿ ಪ್ರಕರಣ : ಯುವತಿಯ ಅಜ್ಜಿ ಮನೆಗೆ ನೋಟಿಸ್ ಅಂಟಿಸಿದ ಕಬ್ಬನ್ ಪಾರ್ಕ್ ಪೊಲೀಸ್..!
ಇದೇ ವೇಳೆ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಕುರಿತು ಮಾತನಾಡಿದ ವಿಜಯೇಂದ್ರ ಅವರು ರಾಜ್ಯ ಸರ್ಕಾರ SIT ಮೂಲಕ ತನಿಖೆ ನಡೆಸುತ್ತಿದ್ದಾರೆ. ನಿನ್ನೆ ರಮೇಶ್ ಜಾರಕಿಹೊಳಿ ದೂರು ನೀಡಿದ್ದಾರೆ. ಬರುವ ದಿನಗಳಲ್ಲಿ ತನಿಖೆ ಬಳಿಕ ಯಾವುದು ಮುಚ್ಚಿಡುವಂತದಿಲ್ಲ. ಸತ್ಯ ಏನೆಂಬುದು ರಾಜ್ಯದ ಜನರಿಗೆ ಗೊತ್ತಾಗುತ್ತದೆ. ಸಮಗ್ರ ತನಿಖೆಯ ಬಳಿಕ ಗೊತ್ತಾಗುತ್ತದೆ. ಯಾವ ಸಂದರ್ಭದಲ್ಲಿ ವಿಡಿಯೋ ಬಿಟ್ಟಿದ್ದಾರೆ, ತನಿಖೆ ಬಳಿಕ ಸತ್ಯ ಹೊರ ಬರುತ್ತದೆ ಎಂದಿದ್ದಾರೆ.