ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ವೇಳೆ ಅವಕಾಶ ತಪ್ಪಿದ್ದಕ್ಕೆ ಶಾಸಕರ ಅಸಮಾಧಾನ ಒಂದೆಡೆಯಾದರೆ, ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಮಾಡಿರುವ ಸಿಡಿ ಬಾಂಬ್ ಬೆನ್ನಲ್ಲೇ ಬಿಜೆಪಿ ಚಾಣಾಕ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ರಾಜ್ಯಕ್ಕೆ ಎರಡು ದಿನಗಳ ಭೇಟಿಗೆ ಆಗಮಿಸುತ್ತಿದ್ದಾರೆ.
ನಾಳೆ ಸಂಜೆ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಕೋರ್ ಕಮಿಟಿ ಸಭೆಯಲ್ಲಿ ಖುದ್ದು ಅಮಿತ್ ಶಾ ಹಾಗೂ ರಾಜು ಉಸ್ತುವಾರಿ ಅರುಣ್ ಸಿಂಗ್ ಪಾಲ್ಗೊಳ್ಳುತ್ತಿದ್ದಾರೆ. ಸಂಪುಟ ವಿಸ್ತರಣೆ ಬೆನ್ನಲ್ಲೇ, ರಾಜ್ಯ ಬಿಜೆಪಿ ಉಂಟಾಗಿರುವ ಭಿನ್ನಮತ ಹಾಗೂ ಬಹಿರಂಗ ಹೇಳಿಕೆ ಸೇರಿದಂತೆ ಎಲ್ಲಾ ಬೆಳವಣಿಗೆಗಳನ್ನೂ ಅಮಿತ್ ಶಾ ಸೇರಿದಂತೆ ಹೈಕಮಾಂಡ್ ನಾಯಕರು ಗಮನಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಕೋರ್ ಕಮಿಟಿ ಸಭೆ ಬಹಳ ಮಹತ್ವ ಪಡೆದುಕೊಂಡಿದ್ದಾರೆ.
ಮತ್ತೊಂದೆಡೆ, ಸಚಿವ ಸಂಪುಟಕ್ಕೆ ಆಯ್ಕೆಯಲ್ಲಿ ನನ್ನದೇನೂ ಪಾತ್ರವಿಲ್ಲ, ಅಸಮಾಧಾನವಿದ್ದರೆ ಹೈಕಮಾಂಡ್ಗೆ ದೂರು ದೂರು ಕೊಡಿ ಎಂದು ಹೇಳಿದ್ದರು. ಈ ಎಲ್ಲಾ ಬೆಳವಣಿಗೆಗಳು ನಾಳೆಯ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಗೆ ಬರಲಿವೆ.
ಯಾರಿಗೆ ಕಾದಿದೆ ಗ್ರಹಚಾರ..!
ಯತ್ನಾಳ್ ಸಿಡಿ ಬಾಂಬ್ ಹಾಗೂ ಅತೃಪ್ತರ ಹೇಳಿಕೆಗಳಿಂದ ಬಿಜೆಪಿಗೆ ತೀವ್ರ ಮುಜುಗರ ಉಂಟಾಗಿದ್ದು, ಅಮಿತ್ ಶಾ ಅವರ ಕೆಂಗಣ್ಣಿಗೂ ಗುರಿಯಾಗುವ ಸಾಧ್ಯತೆ ಇದೆ.
ಮತ್ತೊಂದೆಡೆ, ನಾಯಕತ್ವ ಬದಲಾವಣೆ ಸೇರಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧವೇ ಯತ್ನಾಳ್ ಸೇರಿದಂತೆ ಕೆಲ ನಾಯಕರು ಗಂಭೀರ ಆರೋಪ ಮಾಡುತ್ತಿರುವ ಹಿನ್ನೆಲೆಯಲ್ಲಿ ಯಾರಿಗೆ ಗ್ರಹಚಾರ ಕಾದಿದೆಯೋ ಎಂಬ ನಡುಕ ಬಿಜೆಪಿ ನಾಯಕರಲ್ಲಿ ಶುರುವಾಗಿದೆ ಎನ್ನಲಾಗಿದೆ.
ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆಯಿಂದ ಪಕ್ಷದಲ್ಲಿ ಉಂಟಾಗಿರುವ ಅಸಮಾಧಾನ, ಸಿಡಿ ಕುರಿತು ಶಾಸಕರ ಹೇಳಿಕೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಸಿಡಿ ಕುರಿತು ಶಾಸಕರ ಹೇಳಿಕೆಗಳಿಂದ ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್ ಆಗಿರುವ ಹಿನ್ನೆಲೆಯಲ್ಲಿ ಡ್ಯಾಮೇಜ್ ನಿಯಂತ್ರಿಸಲು ಬಿಜೆಪಿ ನಾಯಕರಿಗೆ ಎಚ್ಚರದಿಂದಿರುವಂತೆ ಸೂಚನೆ ನೀಡಲು ಅಮಿತ್ ಶಾ ಚರ್ಚೆ ನಡೆಸಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳುತ್ತಿವೆ.
ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಹೊನ್ನಾಳಿ ಶಾಸಕ ರೇಣುಕಾಚಾರ್ಯ, ಅರುಣ್ ಸಿಂಗ್ಗೆ ದೂರು ನೀಡಿ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ನಡೆಯಲಿರುವ ರಾಜ್ಯ ಕೋರ್ ಕಮಿಟಿ ಸಭೆ ಅತ್ಯಂತ ಮಹತ್ವ ಪಡೆದಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel