ಸಿಡಿಎಸ್ ಬಿಪಿನ್ ರಾವತ್ ಹೆಲಿಕಾಪ್ಟರ್ ದುರಂತ: ಹವಾಮಾನ ವೈಪರಿತ್ಯ ಕಾರಣ
ನವದೆಹಲಿ: ಕಳೆದ ತಿಂಗಳು ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಮೂರು ಸೇನಾಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮರಣಹೊಂದಿದ್ದರು. ಈ ಅಪಘಾತಕ್ಕೆ ಹವಾಮಾನ ವೈಪರಿತ್ಯ ಕಾರಣ ಎಂದು ಪ್ರಾಥಮಿಕ ವರದಿಯಲ್ಲಿ ಹೇಳಲಾಗಿದೆ.
ಕಳೆದ ವರ್ಷ ಡಿಸೆಂಬರ್ 8ರಂದು ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ವೆಲ್ಲಿಂಗ್ಟನ್ ಗೆ ಪ್ರಯಾಣಿಸುತ್ತಿದ್ದ ಜನರಲ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಮತ್ತು 13 ಸೇನಾ ಸಿಬ್ಬಂದಿ ಕೂನೂರು ಕಣಿವೆಯಲ್ಲಿ ಹೆಲಿಕಾಪ್ಟ್ ರ್ ಅಪಘಾತ ದುರಂತದಿಂದ ಮರಣ ಹೊಂದಿದರು. ಈ ಅಪಘಾತವು ಅನಿರೀಕ್ಷಿತ ಹವಾಮಾನ ವೈಪರಿತ್ಯದಿಂದ ಮೋಡದೊಳಕೆ ಹೆಲಿಕಾಪ್ಟ್ ರ್ ಪ್ರವೇಶಿಸಿದೆ, ಇದರಿಂದ ಪೈಲೆಟ್ ವಿಚಲಿತಗೊಂಡಿದ್ದಾರೆ. ಹೀಗಾಗಿ ಅಪಘಾತ ಸಂಭವಿಸಿದೆ ಎಂದು ತನಿಕಾ ತಂಡ ವರದಿ ಸಲ್ಲಿಸಿದೆ.
ಅಲ್ಲದೇ ಅಪಘಾತಕ್ಕೆ ಯಾವುದೇ ತಾಂತ್ರಿಕ ವೈಫಲ್ಯ, ವಿಧ್ವಂಸಕ ಕೃತ್ಯ ಅಥವಾ ನಿರ್ಲಕ್ಷ್ಯ ಕಾರಣವಾಗಿಲ್ಲ. ಸೇನಾ ಹೆಲಿಕಾಪ್ಟರ್ ಪತನದ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಕೇಂದ್ರ ಸರ್ಕಾರ ಏರ್ ಮಾರ್ಷಲ್ ಮನ್ವಿಂದರ್ ಸಿಂಗ್ ನೇತೃತ್ವದ ತನಿಖಾ ತಂಡ ರಚಿಸಿತ್ತು. ಈ ತಂಡ ಇದೀಗ ತನಿಖೆ ನಡೆಸಿ ವರದಿ ಸಲ್ಲಿಸಿದೆ.