ಶ್ರೀನಗರ: ಪಾಕ್ ನಿಂದ ಕದನ ವಿರಾಮ ಉಲ್ಲಂಘನೆಯಾಗಿದ್ದು, ಜಮ್ಮು-ಕಾಶ್ಮೀರದ ಗಡಿಯಲ್ಲಿ ಸೇನೆಯಿಂದ ಫೈರಿಂಗ್ ನಡೆದಿದೆ. ದಾಳಿಯಲ್ಲಿ ಓರ್ವ ಬಿಎಸ್ ಎಫ್ ಯೋಧ, ನಾಲ್ವರು ನಾಗರಿಕರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಜಮ್ಮು- ಕಾಶ್ಮೀರ ಗಡಿ ನಿಯಂತ್ರಣ ರೇಖೆ ಹತ್ತಿರ ಪಾಕಿಸ್ತಾನದ ಸೇನೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದೆ. ಗಡಿ ಭದ್ರತಾ ಪಡೆ (ಬಿಎಸ್ಎಫ್) ಭಾರತೀಯ ಪೋಸ್ಟ್ಗಳ ಮೇಲೆ ಪಾಕಿಸ್ತಾನಿ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಪಡೆ ಕೂಡ ಪ್ರತಿ ದಾಳಿ ನಡೆಸಿವೆ ಎಂದು ಬಿಎಸ್ಎಫ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕುಪ್ವಾರಾ ಜಿಲ್ಲೆಯ ಎಲ್ಒಸಿ ಬಳಿ ಒಳನುಸುಳಲು ಯತ್ನಿಸಿದ ಐವರು ಎಲ್ ಇಟಿ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಕದನ ವಿರಾಮ ಉಲ್ಲಂಘನೆ ಮತ್ತು ಅರ್ನಿಯಾ ಪ್ರದೇಶದಲ್ಲಿನ ಅವರ ಪೋಸ್ಟ್ಗಳ ಮೇಲೆ ಅಪ್ರಚೋದಿತ ಗುಂಡಿನ ದಾಳಿಗೆ ಪಾಕಿಸ್ತಾನ ರೇಂಜರ್ಗಳಿಗೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಜಮ್ಮುವಿನಲ್ಲಿರುವ ಬಿಎಸ್ಎಫ್ ಮಾಹಿತಿ ನೀಡಿವೆ.








