ಬೆಂಗಳೂರು, ಮೇ 17 : ಕೊರೋನಾ ಸೋಂಕಿನಿಂದ ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿರುವ ದೇಶಕ್ಕೆ ಕೇಂದ್ರ ಸರಕಾರ ನೆರವಾಗಿದೆ. ಸ್ವಾವಲಂಬಿ ಭಾರತವನ್ನಾಗಿಸಲು ಕೇಂದ್ರ ಸರ್ಕಾರ ಘೋಷಿಸಿರುವ ಪರಿಹಾರದ ಕ್ರಮಗಳಿಂದ ರಾಜ್ಯಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವ್ಯಕ್ತಪಡಿಸಿದರು.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೇಶದಲ್ಲಿ ಖಾಸಗಿ ಸಹಭಾಗಿತ್ವಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರದ ಹಲವಾರು ಯೋಜನೆಗಳು ಮತ್ತು ಹಣಕಾಸು ಸಹಾಯ ರಾಜ್ಯಕ್ಕೆ ನೆರವಾಗಲಿದೆ ಎಂದರು. ರಾಜ್ಯದಲ್ಲಿ ಹಲವಾರು ಖನಿಜ ನಿಕ್ಷೇಪಗಳಿದ್ದು, ಅವುಗಳ ಗಣಿಗಾರಿಕೆ ಮಾಡಲು ಖಾಸಗಿ ಕ್ಷೇತ್ರಕ್ಕೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದ ಯಡಿಯೂರಪ್ಪ ಖನಿಜ ಸಂಬಂಧಿಸಿದ ಕಾಯ್ದೆ ಇದಕ್ಕೆ ಸಹಕಾರಿಯಾಗಲಿದೆ. ಗಣಿಗಾರಿಕೆ ಅವಕಾಶಗಳ ನಿರ್ಬಂಧಗಳು ಸಡಿಲಗೊಳ್ಳಲಿದ್ದು, ಹೆಚ್ಚಿನ ಪ್ರಮಾಣದಲ್ಲಿ ಬಂಡವಾಳ ಹರಿದು ಬರಲಿದೆ. ಇದರಿಂದ ರಾಜ್ಯದಲ್ಲಿ ಉದ್ಯೋಗಾವಕಾಶಗಳು ಹೆಚ್ಚಾಗಲಿವೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ದಲಿತನೆಂಬ ಕಾರಣಕ್ಕೆ ವೇದಿಕೆಯನ್ನು ಗಂಗಾಜಲದಿಂದ ಶುದ್ಧೀಕರಣ: ಸಂಸತ್ತಿನಲ್ಲಿ ಭಾವುಕರಾದ ಖರ್ಗೆ, ಬಿಜೆಪಿಗೆ ಶೇಮ್ ಶೇಮ್ ಸ್ಲೋಗನ್ ಚಾಟಿಯೇಟು!
ನವದೆಹಲಿ: ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಭಾಷಣ ಮಾಡಿ ತೆರಳಿದ ನಂತರ, ಆ...








