ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ – Mysore Dasara Festival
ಮೈಸೂರು, ಅಕ್ಟೋಬರ್17: ಇಂದು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2020 ಕ್ಕೆ ಹೃದ್ರೋಗ ಸಂಸ್ಥೆಯ ನಿರ್ದೇಶಕ ಪದ್ಮಶ್ರೀ ಡಾ.ಸಿ.ಎನ್. ಮಂಜುನಾಥ್ ಅವರು
ವಿಧ್ಯುಕ್ತವಾಗಿ ಚಾಲನೆ ನೀಡಿದರು. Mysore Dasara Festival
ಕೊರೊನಾ ವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ಮೈಸೂರು ದಸರಾ ಆಚರಣೆ ನಡೆಯಲಿದೆ.
ಇಂದು ಬೆಳಗ್ಗೆ 7.45 ರ ತುಲಾ ಲಗ್ನದ ಶುಭ ಮುಹೂರ್ತದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಮೈಸೂರು ದಸರಾ ಮಹೋತ್ಸವಕ್ಕೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾದ ಪದ್ಮಶ್ರೀ ಡಾ.ಸಿ.ಎನ್ .ಮಂಜುನಾಥ್ ಅವರು ವಿಧ್ಯುಕ್ತ ಚಾಲನೆ ನೀಡಿದರು.
ಚಾಮುಂಡಿ ಬೆಟ್ಟದಲ್ಲಿ ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಜನೆ ಮಾಡುವ ಮೂಲಕ ದಸರಾಗೆ ಚಾಲನೆ ನೀಡಲಾಯಿತು. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಪ್ರಹ್ಲಾದ್ ಜೋಶಿ, ಡಿಸಿಎಂಗಳಾದ ಡಾ.ಸಿ.ಎನ್.ಅಶ್ವತ್ಥನಾರಾಯಣ್, ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಚಾಮುಂಡಿ ಬೆಟ್ಟಕ್ಕೆ ಪ್ರವಾಸಿಗರಿಗೆ, ಭಕ್ತರಿಗೆ ನಿಷೇಧ ವಿಧಿಸಲಾಗಿದ್ದು, ಸರ್ಕಾರ ದಸರಾದ ನೇರ ವೀಕ್ಷಣೆಗಾಗಿ ವರ್ಚುಯಲ್ ಪ್ರಸಾರ ಮಾಡಲಿದೆ.
ಇಂದಿನಿಂದ ರಾಜಮನೆತನದ ಖಾಸಗಿ ದರ್ಬಾರ್ ಕೂಡ ಪ್ರಾರಂಭವಾಗಲಿದ್ದು, ಖಾಸಗಿ ದರ್ಬಾರಿನಲ್ಲಿಯೂ 60ವರ್ಷ ಮೇಲ್ಪಟ್ಟ ಕುಟುಂಬಸ್ಥರಿಗೆ ಅವಕಾಶ ನೀಡಲಾಗಿಲ್ಲ.
ಜಗನ್ಮಾತೆಯಾದ ಶ್ರೀ ಚಾಮುಂಡೇಶ್ವರಿ ದೇವಿಯು ನಮಗೆ ಎದುರಾಗಿರುವ ಎಲ್ಲ ಸಂಕಷ್ಟಗಳನ್ನು ಉಪಶಮನ ಮಾಡಿ ನಮ್ಮೆಲ್ಲರಿಗೆ ಸಮಸ್ತ ಸನ್ಮಂಗಳವನ್ನುಂಟು ಮಾಡಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಪೋಸ್ಟ್ ಮಾಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ