ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊರೊನಾ – ‘ಛೀ’ನಾ ಕಪಟತನಕ್ಕೆ ಸಿಕ್ಕ ಮತ್ತೊಂದು ಸಾಕ್ಷಿ..!

Namratha Rao by Namratha Rao
May 25, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

Related posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026
ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

March 4, 2026

ಕೊರೊನಾ – ‘ಛೀ’ನಾ ಕಪಟತನಕ್ಕೆ ಸಿಕ್ಕ ಮತ್ತೊಂದು ಸಾಕ್ಷಿ..!

ಅಮೆರಿಕಾ : ಇಡೀ ವಿಶ್ವಕ್ಕೆ ಚೀನಾ ಕೋವಿಡ್ ಅನ್ನ ಹಂಚಿದ್ದು, ಕೋಟ್ಯಾಂತರ ಜನರ ಸಾವಿಗೆ ಕಾರಣಗವಾಗಿದೆ… ಈವರೆಗೂ ಭಾರತ ಸೇರಿದಂತೆ ಅನೇಕ ದೇಶಗಳು ಈ ಮಹಾಮಾರಿಗೆ ತತ್ತರಿಸಿಹೋಗಿವೆ. ಆದ್ರೆ ಕೊರೊನಾ ಮಹಾಮಾರಿ ಹುಟ್ಟಿಕೊಂಡಾಗಿನಿಂದಲೂ  ಚೀನಾದ ಬಯೋಲಾಜಿಕಲ್ ಲ್ಯಾಬ್ ನಿಂದ ಇಡೀ ವಿಶ್ವಕ್ಕೆ ಜೆನೆಟಿಕ್ ಅಸ್ತ್ರದ ರೂಪದಲ್ಲಿ ಹಬ್ಬಿಸಲಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಲೇ ಇದ್ದರು ಇದನ್ನ ಚೀನಾ ಒಪ್ಪಿಕೊಂಡಿರಲಿಲ್ಲ..Covid victims bodies

ಇತೀಚೆಗೆ ಚೀನಾದ ಅಸಲಿಯತ್ತು ಜಗತ್ತಿನ ಎದುರು ಬಟಾಬಯಲಾಗಿತ್ತು.  ಚೀನಾದ ಮಾನ ಹರಾಜಾಗಿತ್ತು.. ಹೌದು..  2015 ರಲ್ಲಿ ಚೀನಾ ವಿಜ್ಞಾನಿಗಳು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಬರೆದಿರುವ ಒಂದು ಪತ್ರ ಇತ್ತೀಚೆಗೆ ಬಹಿರಂಗವಾಗಿತ್ತು.

ಕರೋನಾ ವೈರಸ್ ನ್ನು ಬಳಸಿ ಅದನ್ನು ಜೆನೆಟಿಕ್ ಅಸ್ತ್ರದ ರೂಪದಲ್ಲಿ ಬಳಸುವ ಬಗ್ಗೆ ಆ ಪತ್ರದಲ್ಲಿ ಚರ್ಚಿಸಲಾಗಿತ್ತು. 2015ರಲ್ಲೇ ಚೀನಾದಲ್ಲಿ  ಕರೋನಾ ಜೆನೆಟಿಕ್ ಅಸ್ತ್ರದ ಬಗ್ಗೆ ಚರ್ಚೆ ನಡೆಸಿರುವುದು ವಿಶ್ವಾದ್ಯಂತ ಸಂಚಲನ ಸೃಷ್ಟಿಸಿತ್ತು. ಕಳೆದ 5 ವರ್ಷಗಳಿಂದ ಚೀನಾ ಕರೋನಾ ಜೆನೆಟಿಕ್ ಅಸ್ತ್ರ ತಯಾರಿಸುತ್ತಿದೆ. ಚೀನಾ ಅಧಿಕಾರಿಗಳ ಈ ಪತ್ರ ಈಗ ಅಮೆರಿಕದ ಕೈಗೂ ಸಿಕ್ಕಾಗಿದೆ. ಅಲ್ಲದೇ ಚೀನಾ ಮೂರನೇ ವಿಶ್ವ ಯುದ್ಧಕ್ಕೆ ತಯಾರಿ ನಡೆಸುತ್ತಿತ್ತು. ಅದರಲ್ಲಿ ಕರೋನಾ ವೈರಸ್ ಜೈವಿಕ ಮತ್ತು ಜೆನೆಟಿಕ್ ಅಸ್ತ್ರ ತಯಾರಿಸಿ ಪ್ರಯೋಗಿಸುವ ಸಿದ್ದತೆ ನಡೆಸುತ್ತಿತ್ತು ಎಂದು ಪತ್ರದ ಆಧಾರ ಮೇಲೆ ಅಮೆರಿಕ ಹೇಳಿದೆ. ಸಿಕ್ರೇಟ್ ಕೋವಿಡ್ ಡಾಕ್ಯುಮೆಂಟ್ ಎಂದು ಹೇಳಲಾಗಿರುವ ಈ ಪತ್ರದಲ್ಲಿ ‘ಇದು ನಮ್ಮ ಗೆಲುವಿನ ಪ್ರಮುಖ ಅಸ್ತ್ರವಾಗಿದೆ’ ಎಂದು ಹೇಳಲಾಗಿತ್ತು.

ಚೀನಾ 2015 ರಿಂದಲೇ ಕರೋನಾ ಜೈವಿಕಾಸ್ತ್ರ ಸೇನಾ ಮಟ್ಟದಲ್ಲಿ ಬಳಸುವ ತಯಾರಿ ನಡೆಸುತ್ತಿತ್ತು ಎಂದು ಅಸ್ಟ್ರೇಲಿಯಾದ Weekend Australian ಎಂಬ ಪತ್ರಿಕೆ ವರದಿ ಮಾಡಿತ್ತು. ಮೂರನೇ ವಿಶ್ವ ಯುದ್ದ ಜೈವಿಕ ಅಸ್ತ್ರದ ಮೂಲಕ ನಡೆಯಲಿದೆ ಎಂದು ಚೀನಾ ಡ್ಯಾಕುಮೆಂಟ್ ತಿಳಿಸಿತ್ತು.

ಇದೀಗ ಇದಕ್ಕೆ ಪುಷ್ಠಿ ನೀಡುವ ಮತ್ತೊಂದು ಮಹತ್ವದ ಅಂಶ ಬಹಿರಂಗವಾಗಿದೆ. ಹೌದು.. ವುಹಾನ್ ಇನ್‍ಸ್ಟಿಟ್ಯೂಟ್ ಆಫ್ ವೈರಲಾಜಿ ಕೇಂದ್ರದ ಮೂವರು ಸಂಶೋಧಕರು 2019 ನವೆಂಬರ್ ತಿಂಗಳಿನಲ್ಲಿ ಆಸ್ಪತ್ರೆಗೆ  ದಾಖಲಾಗಿದ್ದ ಸ್ಫೋಟಕ ವಿಚಾರ ಈಗ ಬೆಳಕಿಗೆ ಬಂದಿದೆ.

ಅಮೆರಿಕ ವಾಲ್‍ಸ್ಟ್ರೀಟ್ ಜರ್ನಲ್ ಅಮೆರಿಕದ ಗುಪ್ತಚರ ಮಾಹಿತಿಯನ್ನು ಆಧಾರಿಸಿ ಈ ವರದಿ ಮಾಡಿದ್ದು ಸಂಚಲನ ಮೂಡಿಸಿದೆ. ಡೊನಾಲ್ಡ್ ಟ್ರಂಪ್ ಆಡಳಿತ ಅವಧಿಯ ಕೊನೆಯ ದಿನಗಳಲ್ಲಿನ ಮಾಹಿತಿಯನ್ನು ಆಧಾರಿಸಿ ಈ ವರದಿಯನ್ನು ಪ್ರಕಟಿಸಿದೆ. ಅನಾರೋಗ್ಯ ಪೀಡಿತ ಸಂಶೋಧಕರ ಸಂಖ್ಯೆ, ಅವರ ಅನಾರೋಗ್ಯದ ಸಮಯ ಮತ್ತು ಅವರ ಆಸ್ಪತ್ರೆ ಭೇಟಿಗಳ ಬಗ್ಗೆ ಹೊಸ ವಿವರಗಳು ಈ ಗುಪ್ತಚರ ವರದಿಯಲ್ಲಿದೆ ಎಂದು ಹೇಳಿದೆ.

ವಿವಿಧ ಮೂಲಗಳನ್ನು ಆಧಾರಿಸಿ ಗುಪ್ತಚರ ವರದಿಗಳು ಪ್ರಕಟವಾಗುತ್ತದೆ. ಮೂವರು ಸಂಶೋಧಕರು ಅನಾರೋಗ್ಯಕ್ಕೆ ಕಾರಣವಾಗಿದ್ದು ಯಾಕೆ ಎನ್ನುವುದು ತಿಳಿದು ಬರಬೇಕಿದೆ ಎಂದು ಅಮೆರಿಕದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೊರೊನಾ ವೈರಸ್ ಮೂಲದ ಬಗ್ಗೆ ತನಿಖೆ ನಡೆಸಲು ವಿಶ್ವ ಆರೋಗ್ಯ ಸಂಸ್ಥೆ ನೇಮಿಸಿದ ತಂಡದ ಮುಂದಿನ ಸಭೆ ಕೆಲ ದಿನಗಳಲ್ಲಿ ನಡೆಯಲಿರುವ ಬೆನ್ನಲ್ಲೇ ಈ ವರದಿ ಪ್ರಕಟಗೊಂಡಿದ್ದರಿಂದ ಈಗ ಮಹತ್ವ ಪಡೆದಿದೆ.

2019ರ ಕೊನೆಯಲ್ಲಿ ಕೋವಿಡ್ 19 ಬಂದಿದ್ದರೂ ಈ ವಿಚಾರವನ್ನು ಮುಚ್ಚಿಟ್ಟಿತ್ತು ಎಂಬ ಗಂಭೀರ ಆರೋಪ ಚೀನಾದ ಮೇಲಿದೆ. ಈಗ ಈ ಆರೋಪಕ್ಕೆ ಪುಷ್ಠಿ ನೀಡುವಂತೆ ಈ ವರದಿ ಪ್ರಕಟಗೊಂಡಿದೆ.

ಕೊರೋನಾ ವೈರಸ್ ವೇಗವಾಗಿ ಹರಡುತ್ತಿರುವುದನ್ನು ಗಮನಿಸಿ ಈಗ ಚೀನಾವೇ ಈ ವೈರಸ್ ಸೃಷ್ಟಿ ಮಾಡಿತೇ ಎಂಬ ಬಲವಾದ ಶಂಕೆ ಕಳೆದ ವರ್ಷವೇ ಎದ್ದಿತ್ತು. ವೈರಸ್ ಅಧ್ಯಯನ ಮಾಡಲೆಂದೇ ವುಹಾನ್ ನಗರದಲ್ಲಿ ಚೀನಾ ಸರ್ಕಾರ ಸಂಶೋಧನಾ ಕೇಂದ್ರಗಳನ್ನು ತೆರೆದಿದೆ. ವುಹಾನ್ ಇನ್‍ಸ್ಟಿಟ್ಯೂಟ್ ಆಫ್ ವೈರಾಲಜಿ ಎಂಬ ಸಂಸ್ಥೆಯಲ್ಲಿ ಸಾರ್ಸ್ ಸೇರಿದಂತೆ ಹಲವು ವೈರಸ್ ಗಳ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ.

ವುಹಾನ್ ವಿಶ್ವವಿದ್ಯಾಲಯಲ್ಲಿ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಪೀಡಿತರಾಗಿದ್ದರು. ಭಾರತದಲ್ಲಿ ಮೊದಲು ಕೇರಳದ ಮೂರು ಮಂದಿ ವಿದ್ಯಾರ್ಥಿಗಳಲ್ಲಿ ಕೊರೊನಾ ವೈರಸ್ ಪತ್ತೆಯಾಗಿತ್ತು. ಈ ಮೂವರು ವುಹಾನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೇ ಆಗಿದ್ದರು.

ವೈರಾಲಜಿ ಸಂಸ್ಥೆಯಲ್ಲಿ ಏನು ಪ್ರಯೋಗ ಕೈಗೊಳ್ಳಲಾಗುತ್ತದೆ ಎನ್ನುವುದು ಈಗಲೂ ರಹಸ್ಯವಾಗಿದೆ. ಯುದ್ಧದ ಮೂಲಕ ದೇಶಗಳ ಜೊತೆ ಹೋರಾಡುವುದು ಇಂದು ಬಹಳ ಕಷ್ಟ. ಹೀಗಾಗಿ ಚೀನಾ ಜೈವಿಕ ಅಸ್ತ್ರವನ್ನು ತಯಾರು ಮಾಡುತ್ತದೆ ಎನ್ನುವ ಆರೋಪ ಚೀನಾದ ಮೇಲಿದೆ..

ಒಟ್ಟಾರೆ ಕಪಟಿ ಚೀನಾದ ಅಸಲಿ ಮುಖವಾಡ ಜಗತ್ತಿನ ಎದುರು ಕಳಚಿಬಿದ್ದಿದ್ದು, ಇಡೀ ವಿಶ್ವವೇ ಚೀನಾಗೆ ಛೀಮಾರಿ ಹಾಕುತ್ತಿದೆ. ಮತ್ತೊಂದೆಡೆ ಚೀನಾದ ಪಾಪ ಕರ್ಮದಿಂದಾಗಿ ವಿಶ್ವದ್ಯಾಂತ  ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ.. ಲೆಕ್ಕವೇ ಸಿಗದಷ್ಟು ಜನ ಪ್ರಾಣ ಕಳೆದುಕೊಂಡಿದ್ದಾರೆ. ಪ್ರತಿ ನಿತ್ಯ ಸಾಯುತ್ತಿದ್ದಾರೆ. ದೇಶಗಳು ಆರ್ಥಿಕವಾಗಿ ಕುಸಿತ ಕಂಡಿವೆ..  ಚೀನಾ ಎಂತಹ ಕಪಟಿ ಎಂದು ಈ ಹಿಂದೆಯೇ ಎಲ್ಲರಿಗೂ ಗೊತ್ತಿತ್ತು.. ಇದೀಗ ಅದಕ್ಕೆ ಮತ್ತೊಂದು ಸಾಕ್ಷಿ ಸಿಕ್ಕಂತಾಗಿದೆ.

Tags: chainacovid19 virusvuhan
ShareTweetSendShare
Join us on:

Related Posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram