ಚೀನಾ ಲ್ಯಾಬ್ ನಿಂದ ವೈರಸ್ ಸೋರಿಕೆ..? – ವಿಶ್ವಸಂಸ್ಥೆಯಿಂದ ಅಧ್ಯಯನ ಯೋಜನೆ…“ಆಘಾತಕಾರಿ” ಎಂದ ಚೀನಾ..!
ಇಡೀ ವಿಶ್ವಕ್ಕೆ ಕೊರೊನಾ ವೈರಸ್ ಹಬ್ಬಿಸಿ ಕೋಟ್ಯಾಂತರ ಜನರ ಸಾವಿಗೆ ಕಾರಣವಾಗಿರುವ ಚೀನಾದ ಮೇಲೆ ಇಡೀ ವಿಶ್ವಕ್ಕೆ ಅನುಮಾನ ಕಾಡ್ತಿದೆ.. ಚೀನಾ ವುಹಾನ್ ನ ಮಾರುಕಟ್ಟೆಯಿಂದ ವೈರಸ್ ಹಬ್ಬಿರೋದಾಗಿ ಬಾಯಿ ಬಡೆದುಕೊಳ್ತಿದೆ.. ಆದ್ರೆ ಇಡೀ ವಿಶ್ವ ಅದ್ರಲ್ಲೂ ಅಮೆರಿಕಾ ಅಂತು ಇದನ್ನ ಒಪ್ಪೋದಕ್ಕೆ ಸುತಾರಾಮ್ ತಯಾರಿಲ್ಲ. ವೈರಸ್ ಹಬ್ಬಿರೋದು ಮಾರುಕಟ್ಟೆಯಿಂದ ಅಲ್ಲ ಲ್ಯಾಬ್ ನಿಂದಲೇ ಅಂತ ವಾದಿಸುತ್ತಲೇ ಬಂದಿದೆ.. ಇದನ್ನ ಚೀನಾ ಕೂಡ ಖಂಡಿಸುತ್ತಲೇ ಆರೋಪಗಳನ್ನ ತಳ್ಳಿ ಹಾಕುತ್ತಾ ಬಂದಿದೆ.. ಅಲ್ಲದೇ ಕೊರೊನಾ ವೈರಸ್ ಮೂಲಕ ವಿಶ್ವದ ವಿರುದ್ಧ ಕಪಟಿ ಚೀನಾ ಜೆನೆಟಿಕ್ ಅಸ್ತ್ರ ಪ್ರಯೋಗ ಮಾಡಿತೆ ಎಂಬ ಅನುಮಾನವೂ ಇದೆ. ಅದಕ್ಕೆ ಪೂರಕವಾಗಿ ಕೆಲ ದಾಖಲೆಗಳನ್ನು ಸಹ ಅಮೆರಿಕಾ ಈ ಹಿಂದೆ ಬಿಡುಗಡೆಗೊಳಿಸಿತ್ತು.
ಈ ನಡುವೆ ವಿಶ್ವ ಆರೋಗ್ಯ ಸಂಸ್ಥೆಯು ಕೋವಿಡ್–19 ಸಾಂಕ್ರಾಮಿಕದ ಮೂಲದ ಬಗ್ಗೆ ಎರಡನೇ ಹಂತದ ಅಧ್ಯಯನ ನಡೆಸಲು ರೂಪಿಸಿರುವ ಯೋಜನೆ ಆಘಾತಕಾರಿ ಎಂದು ಚೀನಾದ ಹಿರಿಯ ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಯೋಗಾಲಯದಿಂದ ವೈರಸ್ ಸೋರಿಕೆಯಾಗಿದೆ ಎಂಬ ವದಂತಿಯನ್ನು ತಳ್ಳಿ ಹಾಕಿದ ರಾಷ್ಟ್ರೀಯ ಆರೋಗ್ಯ ಆಯೋಗದ ಉಪ ಸಚಿವ ಝೆಂಗ್ ಯಿಕ್ಸಿನ್, ಇದು ಸಾಮಾನ್ಯ ಜ್ಞಾನಕ್ಕೆ ವಿರುದ್ಧವಾದ ಸಿದ್ಧಾಂತವಾಗಿದೆ ಎಂದು ಹೇಳಿದ್ದಾರೆ. ಪ್ರಯೋಗಾಲಯದಿಂದ ವೈರಸ್ ಸೋರಿಕೆಯಾಗಿದೆ ಎಂಬ ವದಂತಿ, ವಿಜ್ಞಾನಕ್ಕೆ ವಿರುದ್ಧವಾದದು ಎಂದೂ ಹೇಳಿದ್ದಾರೆ. ಚೀನಾದ ಪ್ರಯೋಗಾಲಯದಿಂದ ಕೊರೊನಾ ವೈರಸ್ ಸೋರಿಕೆ ಮತ್ತು ಸಾಂಕ್ರಾಮಿಕ ರೋಗದ ನಡುವಿನ ಸಂಭಾವ್ಯ ಸಂಬಂಧವನ್ನು ತಕ್ಷಣದಲ್ಲೇ ತಳ್ಳಿ ಹಾಕಲು ಸಾಧ್ಯವಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥರು ಕಳೆದ ವಾರ ಒಪ್ಪಿಕೊಂಡಿದ್ದರು.
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.