ಬೆಂಗಳೂರು: ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ಕೋಟಿ ಕೋಟಿ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆ ಸಂದರ್ಭದಲ್ಲಿ ಚೈತ್ರಾ (Chaitra) ತಪ್ಪು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಬಿಜೆಪಿಯ ಕೆಲ ನಾಯಕರು ಗೊತ್ತಿದ್ರಿಂದ ಅಭಿನವ ಹಾಲಶ್ರೀ ಅವರನ್ನು ಭೇಟಿಯಾದಾಗ ನನಗೆ ಒಂದು ಮಾತು ಹೇಳಿದ್ದರು. 10 ಜನರ ಪೈಕಿ 6 ಜನರಿಗೆ ಟಿಕೆಟ್ ಕೊಡಿಸಿದ್ರು. ಇನ್ನು 4 ಜನರಿಗೆ ಟಿಕೆಟ್ ಕೊಡಿಸ್ತೀನಿ ಅಂತ ಹೇಳಲಾಗಿತ್ತು. ಬಿಜೆಪಿಯ ಟಿಕೆಟ್ (BJP Ticket) ಯಾರಿಗಾದ್ರೂ ಬೇಕಾದರೆ ನನಗೆ ಹೇಳಿ ಕೊಡಿಸುತ್ತೇನೆ ಎಂದು ಹೇಳಿದ್ದರು. ಇತ್ತೀಚೆಗೆ ಪ್ರಸಾದ್ ಬೈಂದೂರು (Prasad Baindoor) ಮೂಲಕ ನನಗೆ ಗೋವಿಂದ ಬಾಬು ಪೂಜಾರಿ (Govinda Babu Poojary) ಸಂಪರ್ಕ ಆಯಿತು. ಆಗ ಗೋವಿಂದಬಾಬು ಪೂಜಾರಿಗೆ ಮೋಸ ಮಾಡಲು ಮುಂದಾದೇವು. ಚಿಕ್ಕಮಗಳೂರಿನ ಅತಿಥಿ ಗೃಹಕ್ಕೆ ಕರೆಸಿಕೊಂಡು ಧನರಾಜ್ ಮತ್ತು ರಮೇಶ್ ಇಬ್ಬರನ್ನು ಪಿಎಂ ಮತ್ತು ಗೃಹಸಚಿವಾಲಯದ ನಿಕಟವರ್ತಿಗಳು ಅಂತ ಪರಿಚಯ ಮಾಡಿದೇವು. ಆಗ ಅವರು 50 ಲಕ್ಷಕ್ಕೆ ಬೇಡಿಕೆ ಇಟ್ಟರು. ಆಗ ಏಕಾಏಕಿ ಹಣ ನೀಡಲು ಪೂಜಾರಿ ಮುಂದಾಗಿ.ಧನರಾಜ್ ಮತ್ತು ರಮೇಶ್ಗೆ 2 ಲಕ್ಷ ಹಣ ಕೊಟ್ವಿ. ಶಿವಮೊಗ್ಗದ ಆರ್ಎಸ್ಎಸ್ ಕಚೇರಿಯ ಬಳಿ ಮತ್ತೆ ಕರೆಸಿ 3 ಕೋಟಿ ಕೇಳಲಾಯಿತು. ದ್ವಿ. 3 ಕೋಟಿಯನ್ನು ಪ್ರಸಾದ್ ಬೈಂದೂರು ಮೂಲಕ ಮಂಗಳೂರಿಗೆ ಹಣ ತರಿಸಿಕೊಳ್ಳಲಾಯಿತು ಎಂದು ಸೇರಿದಂತೆ ಹಣ ಯಾರಿಗೆ ಎಷ್ಟು ಪ್ರಮಾಣದಲ್ಲಿ ನೀಡಿದ್ದಾರೆ ಎಂಬುವುದನ್ನು ಒಪ್ಪಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.