ಚಾಮರಾಜನಗರದಲ್ಲಿ 24 ಮಂದಿ ಸಾವಿಗೆ ಸರ್ಕಾರವೇ ಕಾರಣ : ಡಿ.ಕೆ.ಶಿವಕುಮಾರ್
ಬೆಂಗಳೂರು : ಆಕ್ಸಿಜನ್ ಕೊರತೆಯಿಂದಾಗಿ ಚಾಮರಾಜನಗರದಲ್ಲಿ 24 ಮಂದಿ ಮೃತಪಟ್ಟಿದ್ದಕ್ಕೆ ರಾಜ್ಯ ಸರ್ಕಾರವೇ ನೇರ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಹೆಚ್ಚಾಗುತ್ತಿದ್ದು, ಈ ಪರಿಸ್ಥಿತಿಗೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಎರಡು ಕಾರಣವಾಗಿವೆ.
24 ಜನರ ಕೊಲೆಗೆ ಸರ್ಕಾರವೇ ಕಾರಣ. ನ್ಯಾಯಮೂರ್ತಿಗಳು ಇದೇ ವರದಿ ಕೊಟ್ಟಿದ್ದಾರೆ. ಜನರ ಸಾವಿನ ಹೊಣೆ ಯಾರು ಹೊತ್ಕೊಳ್ತಾರೆ..? ಇದನ್ನ ನೀವೇ ನಿರ್ಧಾರ ಮಾಡಬೇಕು.
ಸರ್ಕಾರ ಮಿಸ್ ಗೈಡ್ ಮಾಡುವ ಪ್ರಯತ್ನ ಮಾಡಿದರು. ನ್ಯಾಯಮೂರ್ತಿಗಳೇ ವರದಿ ಕೊಟ್ಟಿದ್ದಾರೆ. 24 ಜನ ಸತ್ತಿದ್ದಕ್ಕೆ ಸರ್ಕಾರವೇ ಹೊಣೆ ಹೊರಬೇಕು ಎಂದು ಗರಂ ಆದರು
ಇನ್ನು ಇದೇ ವೇಳೆ ಸಂಜೆ ಸಿಎಂ ಸುದ್ದಿಗೋಷ್ಠಿ ಬಗ್ಗೆ ಮಾತನಾಡಿ, ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿ ಕರೆದಿದ್ದಾರೆ.
ಸರ್ಕಾರ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಬೇಕು. ಪ್ರತಿ ಬಡ ಕುಟುಂಬಕ್ಕೆ 10 ಸಾವಿರ ಆರ್ಥಿಕ ನೆರವು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ಕೊರೊನ ಮಹಾಮಾರಿ:
ಕೊರೊನ ವೈರಸ್ ಗೆ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.