ಚಾಮರಾಜನಗರ – ಕೊರೊನಾ ಸೋಂಕಿತರ ಸಾವು ಪ್ರಕರಣ – ತನಿಖೆಗೆ ಹೈಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ
ಬೆಂಗಳೂರು: ಮೇ 3ರಂದು ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 19 ರೋಗಿಗಳು ಸಾವನಪ್ಪಿದ್ದರು ಎನ್ನಲಾಗಿತ್ತು. ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ರೋಗಿಗಳ ಸಾವಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಹೈಕೋರ್ಟ್ ನ್ಯಾಯಮೂರ್ತಿ ಬಿ.ಎ. ಪಾಟೀಲ್ ನೇತೃತ್ವದಲ್ಲಿ ಏಕಸದಸ್ಯ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಪ್ರಕರಣದ ತನಿಖೆಯನ್ನ ಇನ್ನೂ ಸಮಿತಿ ನಡೆಸಲಿದೆ. ಪ್ರಕರಣಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಚಾಮರಾಜನಗರ, ಮೈಸೂರು ಜಿಲ್ಲಾಧಿಕಾರಿಗಳು ಈ ಸಂಬಂಧಿತ ಎಲ್ಲ ದಾಖಲಾತಿಗಳನ್ನು ತನಿಖಾ ಸಮಿತಿಗೆ ಒಪ್ಪಿಸಲು ಆರೋಗ್ಯ ಇಲಾಖೆಗೆ ಸಲ್ಲಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಒಟ್ನಲ್ಲಿ ದೇಶದಲ್ಲಿ ಕೊರೊನಾಗೆ ಲೆಕ್ಕವಿಲ್ಲದಷ್ಟು ಮಂದಿ ಬಲಿಯಾಗ್ತಿದ್ದಾರೆ. ಅದೆಷ್ಟೋ ಜನರು ತಮ್ಮವರನ್ನ ಕಳೆದುಕೊಂಡು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಸಿನಿ ತಾರಯರು ಸಹ ತಮ್ಮರನ್ನ ಕಳೆದುಕೊಂಡು ನೋವನ್ನ ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಳ್ತಿದ್ದಾರೆ. ಸೋಂಕಿತರು ಬೆಡ್ ಸಿಗದೇ ಆಕ್ಸಿಜನ್ ಕೊರತೆಯಿಂದ ನರಳಿ ನರಳಿ ಪ್ರಾಣ ಬಿಡುತ್ತಿದ್ದಾರೆ.