ಬೆ0ಗಳೂರು: ಬಿಗ್ ಬಾಸ್-5 ವಿಜೇತ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ನಾಳೆ ಸಪ್ತಪದಿ ತುಳಿಯಲಿದ್ದಾರೆ. ಇವರ ವಿವಾಹವು ಮೈಸೂರಿನ ಹಿನಕಲ್ನ ಹುಣಸೂರು ರಸ್ತೆಯಲ್ಲಿರುವ ನ್ಯೂ ಸ್ಪೆಟ್ರ ಕನ್ವೆನ್ಷನ್ ಹಾಲ್ನಲ್ಲಿ ನೆರವೇರಲಿದ್ದು, ಇಂದು ಸಂಜೆ ಆರತಕ್ಷತೆ ನಡೆಯಲಿದೆ. ನಾಳೆ ಬೆಳಗ್ಗೆ 8.15 ರಿಂದ 9 ಗಂಟೆಯೊಳಗೆ ಸಲ್ಲುವ ಶುಭ ಮುಹೂರ್ತದಲ್ಲಿ ವಿವಾಹ ಬಂಧನಕ್ಕೆ ಒಳಗಾಗಲಿದ್ದಾರೆ. ಗಾಯಕ, ಸಂಗೀತ ನಿರ್ದೇಶಕರಾದ ಚಂದನ್ಶೆಟ್ಟಿ ಬಿಗ್ಬಾಸ್-5ನಲ್ಲಿ ಪಾಲ್ಗೊಂಡಿದ್ದ ವೇಳೆ ನಿವೇದಿತಾ ಗೌಡ ಅವರ ಪರಿಚಯವಾಗಿತ್ತು. ನಂತರ ಪರಸ್ಪರ ಪ್ರೀತಿಸುತ್ತಿದ್ದ ಇವರು ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡಿದ್ದರು.
ಬಂದೂಕಿನ ಸದ್ದುಗಳ ನಡುವೆ ಹುಟ್ಟಿದ್ದ ಮಗು.., ಇಂದು ಫುಟ್ಬಾಲ್ ಜಗತ್ತಿನ ಧ್ರುವ ನಕ್ಷತ್ರ..!
ಇದು ಖಂಡಿತವಾಗಿಯೂ ಕಾಲ್ಪನಿಕ ಕಥೆಯಲ್ಲ. ನಮ್ಮ ಕಣ್ಣೆದುರೇ ನೋಡುತ್ತಿರುವ, ನಡೆದ, ನಡೆಯುತ್ತಿರುವ ವಾಸ್ತವ ಚಿತ್ರಣಗಳ ಅಕ್ಷರ ರೂಪವಷ್ಟೇ. ಬಂದೂಕಿನ ಸದ್ದುಗಳ ನಡುವೆ, ರಕ್ತದ ಮಡುವಿನಲ್ಲೇ ಹುಟ್ಟಿದ್ದ ಮಗು...








