ಬೆಂಗಳೂರು ಗ್ರಾಮಾಂತರ: ನೆಲಮಂಗಲದ (Nelamangala Accident) ಹತ್ತಿರ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 6 ಜನ ಸಾವನ್ನಪ್ಪಿದ್ದಾರೆ. ಈ ವೇಳೆ ಸಾವನ್ನಪ್ಪಿರುವ ಚಂದ್ರಮ್ ಐಟಿ ಉದ್ಯಮಿ. ಬೆಂಗಳೂರಿನಲ್ಲಿ ಕಂಪನಿಯೊಂದರ ಮಾಲೀಕರಾಗಿರುವ ಅವರು ಸುಮಾರು 50ಕ್ಕೂ ಅಧಿಕ ಜನರಿಗೆ ಉದ್ಯೋಗ ನೀಡಿದ್ದಾರೆ.
ನೆಲಮಂಗಲದ ಬಳಿ ಕಂಟೇನರ್ ಲಾರಿಯು ಕಾರಿನ ಮೇಲೆ ಬಿದ್ದ ಪರಿಣಾಮ ಒಂದೇ ಕುಟುಂಬದ 6 ಜನ ಸಾವನ್ನಪ್ಪಿದ್ದಾರೆ. ಮೃತರು ಬಿಜಾಪುರ ಮೂಲದವರು. ಚಂದ್ರಮ್ ಯಾಗಪ್ಪಗೋಳ್ ಬೆಂಗಳೂರಿನಲ್ಲಿ ಕಂಪನಿ ಮಾಲೀಕ. ಸುಮಾರು 50ಕ್ಕೂ ಅಧಿಕ ಜನರಿಗೆ ಉದ್ಯೋಗ ನೀಡಿದ್ದರು. ಹೆಚ್ಎಸ್ಆರ್ ಲೇಔಟ್ ಬಳಿಯಿರುವ ಐಎಎಸ್ಟಿ ಸಾಫ್ಟ್ವೇರ್ ಸಲ್ಯೂಷನ್ಸ್ನಲ್ಲಿ ಸುಮಾರು 50 ಕ್ಕೂ ಹೆಚ್ಚು ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. 2018 ರಲ್ಲಿ ಕಂಪನಿ ಶುರುವಾಗಿತ್ತು. ಅದಕ್ಕೆ ಚಂದ್ರಮ್ ಅವರೆ ಎಂಡಿ, ಸಿಇಒ ಆಗಿದ್ದರು. ಈಗ ಅವರು ಸಾವನ್ನಪ್ಪಿರುವ ಸುದ್ದಿ ಕೇಳಿ ಕಂಪನಿ ಸಿಬ್ಬಂದಿ ಆಘಾತಕ್ಕೊಳಗಾಗಿದ್ದಾರೆ.
ದುಃಖದಿಂದ ಅರ್ಧಕ್ಕೆ ಕೆಲಸ ನಿಲ್ಲಿಸಿ ಹೊರಟು ಹೋಗಿದ್ದಾರೆ. ಮಾಲೀಕನ ಸಾವಿನಿಂದ ಸಿಬ್ಬಂದಿ ದಿಗ್ಭ್ರಾಂತರಾಗಿದ್ದಾರೆ.








