ಬೂಸ್ಟರ್ ಡೋಸ್ ನೀಡುವುದರ ಕುರಿತು ಆರೋಗ್ಯ ಸಚಿವರೊಂದಿಗೆ ಚರ್ಚೆ: ಸಿಎಂ ಬೊಮ್ಮಾಯಿ
ಹಾವೇರಿ: ಕೊರೊನಾ ಬೂಸ್ಟರ್ ಡೋಸ್ ನ್ನು ಯಾರಿಗೆ ಕೊಡಬೇಕು, ಎಷ್ಟು ಅಂತರದಲ್ಲಿ ನೀಡಬೇಕೆಂದು ಆರೋಗ್ಯ ಸಚಿವರು ಗಮನಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶಿಗ್ಗಾವಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಉಚಿತವಾಗಿ ಬೂಸ್ಟರ್ ಡೋಸ್ ನೀಡುವುದರ ಕುರಿತು ಆರೋಗ್ಯ ಸಚಿವರ ಕುರಿತು ಚರ್ಚಿಸಲಾಗುವುದು ಎಂದು ಹೇಳಿದರು.
ಇನ್ನೂ ಯುವಕ ಚಂದ್ರು ಹತ್ಯೆ ಪ್ರಕರಣದ ಕುರಿತು ಮಾತನಾಡಿ ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ. ಸ್ವತಂತ್ರವಾಗಿ ತನಿಖೆ ನಡೆಯಲಿ ಎಂಬ ಉದ್ದೇಶದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.