ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ರಸ್ತೆ ವಾಹನ ಸಂಚಾರ ಬಂದ್..!
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ರಸ್ತೆ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ದಿನದ 24 ಗಂಟೆ ಲಘು ಹಾಗೂ ಕೆಲವು ವಾಹನಗಳ ಸಂಚಾರಕ್ಕೆ ಬುಧವಾರ ಅನುಮತಿ ನೀಡಲಾಗಿತ್ತು. ಆದ್ರೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಈ ಆದೇಶವನ್ನು ಪುನಃ ವಾಪಸ್ ಪಡೆದಿದೆ. ಮತ್ತೆ ಸಂಚಾರ ಬಂದ್ ಆಗಿದೆ.
ಸೌದಿ ಅರೇಬಿಯಾ ಬದಲಿಗೆ ಅಮೆರಿಕಾದಿಂದ ಹೆಚ್ಚು ತೈಲ ಆಮದಿಗೆ ಭಾರತ ನಿರ್ಧಾರ..!
ಮಂಗಳೂರಿನ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಮಾರ್ಗದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದ್ದು ಈ ಸಂದರ್ಭದಲ್ಲಿ ವಾಹನಗಳು ಸಂಚರಿಸಿದರೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಡ್ಡಿಯಾಗಲಿದೆ. ವಾಹನಗಳ ದಟ್ಟಣೆ ಉಂಟಾಗಿ ಅಪಘಾತಗಳು ಸಂಭವಿಸುವುದರಿಂದ ಪ್ರಯಾಣಿಕರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಈ ಹಿಂದೆ ಹೊರಡಿಸಿದ್ದ ಆದೇಶವನ್ನು ವಾಪಸ್ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಎನ್. ರಮೇಶ್ ಆದೇಶದಲ್ಲಿ ತಿಳಿಸಿದ್ದಾರೆ.