ತುಮಕೂರು: ಯುವತಿಗೆ ವ್ಯಕ್ತಿಯೊಬ್ಬ ಮದುವೆಯಾಗಿ ವಂಚಿಸಿರುವ ಘಟನೆಯೊಂದು ನಡೆದಿದೆ.
ಅವರಿಬ್ಬರು ಸಾಮಾಜಿಕ ಜಾಲತಾಣಗಳಲ್ಲಿ (Social Media) ಪರಿಚಯವಾಗಿದ್ದರು. ಗಜೇಂದ್ರ ಎಂಬ ಯುವಕನ ಮೇಲೆಯೇ ಸದ್ಯ ಈ ಆರೋಪ ಕೇಳಿ ಬಂದಿದ್ದು, ಈತ ಎರಡು ವರ್ಷಗಳಿಂದ ಮದುವೆಯಾಗುವುದಾಗಿ ಯುವತಿಯನ್ನು ನಂಬಿಸಿದ್ದಾನೆ ಎನ್ನಲಾಗಿದೆ. ಈಗ ಮದುವೆ ಮುಹೂರ್ತ ಸಮೀಪಿಸುತ್ತಿದ್ದಂತೆಯೇ ಗಜೇಂದ್ರ ಪರಾರಿಯಾಗಿದ್ದಾನೆ. ಪಿಣ್ಯಾದ ದುಗ್ಗಾಲಮ್ಮ ದೇವಾಲಯದಲ್ಲಿ ಇಬ್ಬರ ಮದುವೆ ನಿರ್ಧಾರವಾಗಿತ್ತು. ಆದರೆ, ಗಜೇಂದ್ರ ಮಾರ್ಗ ಮಧ್ಯೆಯೇ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಈ ಹಿಂದೆಯೂ ಗಜೇಂದ್ರ ಯುವತಿಗೆ ಇದೇ ರೀತಿ ಮಾಡಿದ್ದ. ಆಗ ಪೊಲೀಸರು ಮದುವೆಯಾಗುವಂತೆ ಬುದ್ಧಿ ಹೇಳಿದ್ದರು. ಆಗ ಮದುವೆಯಾಗುವುದಾಗಿ ಮುಚ್ಚಳಿಕೆ ಪತ್ರವನ್ನು ಕೂಡ ಆತ ನೀಡಿದ್ದ. ಹೀಗಾಗಿ ತುಮಕೂರಿನಿಂದ ಬೆಂಗಳೂರಿನ ಪಿಣ್ಯಾದ ದುಗ್ಗಾಲಮ್ಮ ದೇವಾಲಯ ಬಳಿಗೆ ಮದುವೆಯಾಗಲು ಹೋಗುತ್ತಿದ್ದಾಗ ನೆಲಗದರನಹಳ್ಳಿ ಬಳಿ ಕಾರು ಇಳಿದು ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಇನ್ಸ್ಟಾಗ್ರಾಮ್ ಮೂಲಕ ಇವರಿಬ್ಬರು ಪರಿಚಯವಾಗಿದ್ದರು. ಆನಂತರ ಯುವಕ ಲೈಂಗಿಕವಾಗಿ ಬಳಸಿಕೊಂಡಿದ್ದ ಎನ್ನಲಾಗಿದೆ. ಯುವತಿ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರೆ, ಗಜೇಂದ್ರ ಊರಿಗನಲ್ಲಿ ವ್ಯವಸಾಯ ಮಾಡಿಕೊಂಡಿದ್ದ. ಅಲ್ಲದೇ, ಆತ ದೂರದ ಸಂಬಂಧಿ ಕೂಡ ಹೌದು ಎನ್ನಲಾಗಿದೆ. ಈಗ ಯುವತಿ ಮತ್ತೆ ಯುವಕನ ವಿರುದ್ಧ ದೂರು ದಾಖಲಿಸಿದ್ದಾಳೆ.