ADVERTISEMENT
Tuesday, January 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟೀಂ ಇಂಡಿಯಾಗೆ ವಿರಾಟ್ ಕಂಬ್ಯಾಕ್.. ರಹಾನೆ, ಪೂಜಾರಾ ಇಬ್ಬರಲ್ಲಿ ಯಾರಿಗೆ ಕೋಕ್

Mahesh M Dhandu by Mahesh M Dhandu
November 30, 2021
in Newsbeat, Sports, ಕ್ರೀಡೆ
Sanjay-manjrekar talks about rahane farm saaksha tv
Share on FacebookShare on TwitterShare on WhatsappShare on Telegram

ಟೀಂ ಇಂಡಿಯಾಗೆ ವಿರಾಟ್ ಕಂಬ್ಯಾಕ್.. ರಹಾನೆ – ಪೂಜಾರಾ ಇಬ್ಬರಲ್ಲಿ ಯಾರಿಗೆ ಕೋಕ್ Cheteshwar Pujara saaksha tv

ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯ ಕಂಡಿದೆ. ಕಾನ್ಪುರದಲ್ಲಿ ಕಿವೀಸ್ ನೀಡಿದ ಹೋರಾಟ ಟೀಮ್ ಇಂಡಿಯಾ ಕೈಯಿಂದ ಗೆಲುವು ಕಿತ್ತುಕೊಂಡಿತ್ತು.

Related posts

ಸಂವಿಧಾನದನ್ವಯ ಅಧಿವೇಶನ ಕರೆದಿದ್ದೇವೆ: ಸಿಎಂ ಸಿದ್ದರಾಮಯ್ಯ

ಸಂವಿಧಾನದನ್ವಯ ಅಧಿವೇಶನ ಕರೆದಿದ್ದೇವೆ: ಸಿಎಂ ಸಿದ್ದರಾಮಯ್ಯ

January 20, 2026
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಚಾಲಕರಹಿತ ಮತ್ತೊಂದು ರೈಲು ಬೆಂಗಳೂರಿಗೆ ಆಗಮನ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಚಾಲಕರಹಿತ ಮತ್ತೊಂದು ರೈಲು ಬೆಂಗಳೂರಿಗೆ ಆಗಮನ

January 20, 2026

ಈಗ ಟೀಮ್ ಇಂಡಿಯಾ 2ನೇ ಟೆಸ್ಟ್ ಕಡೆಗೆ ಗಮನ ಕೊಡುತ್ತಿದೆ. ಮುಂಬೈನ ವಾಂಖೆಡೆಯಲ್ಲಿಯಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯಕ್ಕೆ ಕ್ಯಾಪ್ಟನ್ ವಿರಾಟ್ ಕೊಹ್ಲಿ ತಂಡ ಸೇರಿಕೊಳ್ಳಲಿದ್ದಾರೆ.

ಹೀಗಾಗಿ ಟೀಮ್ ಇಂಡಿಯಾದ ಪ್ಲೇಯಿಂಗ್ 11 ಆರಿಸುವುದು ಕೊಂಚ ತಲೆನೋವಾಗಿದೆ,

ವಿರಾಟ್ ಕೊಹ್ಲಿ ಅಲಭ್ಯರಾಗಿದ್ದರಿಂದ ಶ್ರೇಯಸ್ ಅಯ್ಯರ್ ಮೊದಲ ಟೆಸ್ಟ್ ಪಂದ್ಯ ಆಡಿದ್ದರು.

ಮೊದಲ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಶತಕ ಮತ್ತು 2ನೇ ಇನ್ನಿಂಗ್ಸ್ನಲ್ಲಿ ಅರ್ಧಶತಕ ಸಿಡಿಸಿದ ಶ್ರೇಯಸ್ ತನ್ನ ಜಾಗವನ್ನು ಗಟ್ಟಿಮಾಡಿಕೊಂಡಿದ್ದಾರೆ.

ಅದರೆ ಈಗ ವಿರಾಟ್ಗೆ ತಂಡದಲ್ಲಿ ಜಾಗ ಕೊಡಬೇಕಿದೆ. ಆದರೆ ಯಾರು ತಂಡದಿಂದ ಹೊರಹೋಗಬೇಕು ಅನ್ನುವ ಚರ್ಚೆ ನಡೆಯುತ್ತಿದೆ.

ಸದ್ಯ ಬೌಲಿಂಗ್ ವಿಭಾಗದಲ್ಲ ಬದಲಾವಣೆಯ ಆಯ್ಕೆ ಇಲ್ಲದೇ ಇರುವುದರಿಂದ ಬ್ಯಾಟಿಂಗ್ ವಿಭಾಗದತ್ತಲೇ ನೋಡಬೇಕಿದೆ.

Cheteshwar Pujara saaksha tv

ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರಾ ಮತ್ತು ಉಪನಾಯಕ ಅಜಿಂಕ್ಯಾ ರಹಾನೆ ಮೊದಲ ಟೆಸ್ಟ್ನಲ್ಲಿ ವೈಫಲ್ಯ ಅನುಭವಿಸಿದ್ದರು.

ಹೀಗಾಗಿ ಈ ಮೂವರಲ್ಲಿ ಒಬ್ಬರು ವಿರಾಟ್ಗೆ ಜಾಗ ಬಿಟ್ಟುಕೊಡಬೇಕಾಗಿದೆ. ಮಯಾಂಕ್ ಅವಕಾಶ ಪಡೆಯದೇ ಇದ್ದರೆ ಚೇತೇಶ್ವರ ಪೂಜಾರಾ ಓಪನರ್ ಆಗಿ ಕಣಕ್ಕಿಳಿಯಲಿದ್ದಾರೆ.

ಶ್ರೇಯಸ್ ಒನ್ ಡೌನ್ ಸ್ಥಾನ ಪಡೆದುಕೊಳ್ಳಲಿದ್ದಾರೆ. ಇನ್ನು ಪೂಜಾರಾ ತಂಡದಿಂದ ಹೊರಗಿದ್ದರೆ ಕೂಡ ಶ್ರೇಯಸ್ ಒನ್ ಡೌನ್ ನಲ್ಲಿ ಬ್ಯಾಟಿಂಗ್ಗೆ ಬರಬೇಕಾಗಬಹುದು.

ರಹಾನೆ ತಂಡದಿಂದ ಹೊರಗಿದ್ದರೆ ಬ್ಯಾಟಿಂಗ್ ಆರ್ಡರ್ ಬದಲಾಗುವುದಿಲ್ಲ. ಸದ್ಯದ ಲೆಕ್ಕಾಚಾರದಲ್ಲಿ ಅನುಭವವನ್ನು ಗಮನದಲ್ಲಿಟ್ಟುಕೊಂಡು ಅಗರ್ವಾಲ್ ಅವರನ್ನು ತಂಡದಿಂದ ಹೊರಗಿಡುವ ಲೆಕ್ಕಾಚಾರವೇ ನಡೆಯುತ್ತಿದೆ.

ಇನ್ನು ಬೌಲಿಂಗ್ನಲ್ಲಿ ಬದಲಾವಣೆಗೆ ಅವಕಾಶವೇ ಇಲ್ಲ. ಅಕ್ಸರ್, ಅಶ್ವಿನ್ ಮತ್ತು ಜಡೇಜಾ ಬೌಲಿಂಗ್ ಜೊತೆ ಬ್ಯಾಟಿಂಗ್ ಶಕ್ತಿಯನ್ನೂ ತೋರಿಸಿದ್ದಾರೆ.

ಉಮೇಶ್ ಯಾದವ್ ಮತ್ತು ಇಶಾಂತ್ ಶರ್ಮಾ ಅನಿವಾರ್ಯ ಅನ್ನುವಂತಾಗಿದೆ. ಹೀಗಾಗಿ ವಿರಾಟ್ ಆಗಮನದಿಂದ ಒಬ್ಬ ಆಟಗಾರ ಸ್ಥಾನ ಕಳೆದುಕೊಳ್ಳುವುದು ಖಚಿತ

Tags: #Saaksha TVchetheshwar pujaraCricketrahane
ShareTweetSendShare
Join us on:

Related Posts

ಸಂವಿಧಾನದನ್ವಯ ಅಧಿವೇಶನ ಕರೆದಿದ್ದೇವೆ: ಸಿಎಂ ಸಿದ್ದರಾಮಯ್ಯ

ಸಂವಿಧಾನದನ್ವಯ ಅಧಿವೇಶನ ಕರೆದಿದ್ದೇವೆ: ಸಿಎಂ ಸಿದ್ದರಾಮಯ್ಯ

by Shwetha
January 20, 2026
0

ಹೊಸ ವರ್ಷದ ಆರಂಭದಲ್ಲಿ ಜಂಟಿ ಅಧಿವೇಶನವನ್ನು ಕಡ್ಡಾಯವಾಗಿ ಕರೆಯಬೇಕು ಎಂಬುದು ಸಂವಿಧಾನದಲ್ಲಿ ಸ್ಪಷ್ಟವಾಗಿ ಉಲ್ಲೇಖವಾಗಿದೆ. ಅದರ ಅನ್ವಯವೇ ರಾಜ್ಯ ಸರ್ಕಾರ ಈ ವಿಶೇಷ ಅಧಿವೇಶನವನ್ನು ಕರೆದಿದೆ ಎಂದು...

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಚಾಲಕರಹಿತ ಮತ್ತೊಂದು ರೈಲು ಬೆಂಗಳೂರಿಗೆ ಆಗಮನ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಚಾಲಕರಹಿತ ಮತ್ತೊಂದು ರೈಲು ಬೆಂಗಳೂರಿಗೆ ಆಗಮನ

by Shwetha
January 20, 2026
0

ಬೆಂಗಳೂರಿನ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಸಂತಸದ ಸುದ್ದಿ ಸಿಕ್ಕಿದೆ. ಕೋಲ್ಕತ್ತಾದಿಂದ ಬೆಂಗಳೂರಿಗೆ ಹೊಸ ಚಾಲಕರಹಿತ (ಡ್ರೈವರ್‌ಲೆಸ್) ಮೆಟ್ರೋ ರೈಲು ಆಗಮಿಸಿದ್ದು, ಇದು ಹಳದಿ ಮಾರ್ಗದಲ್ಲಿ ಸಂಚರಿಸಲು ಸಿದ್ಧವಾಗಿದೆ....

GBA ಚುನಾವಣೆ ಬ್ಯಾಲೆಟ್ ಪೇಪರ್‌ನಲ್ಲೇ: EVMಗೆ ಕೊಕ್

GBA ಚುನಾವಣೆ ಬ್ಯಾಲೆಟ್ ಪೇಪರ್‌ನಲ್ಲೇ: EVMಗೆ ಕೊಕ್

by Shwetha
January 20, 2026
0

ಮುಂಬರುವ GBA (ಗ್ರೇಟರ್ ಬೆಂಗಳೂರು ಅಥಾರಿಟಿ) ಚುನಾವಣೆಯನ್ನು ಈ ಬಾರಿ EVM ಯಂತ್ರಗಳಿಲ್ಲದೆ, ಬ್ಯಾಲೆಟ್ ಪೇಪರ್ ಮೂಲಕ ನಡೆಸಲು ರಾಜ್ಯ ಚುನಾವಣಾ ಆಯೋಗ ಮಹತ್ವದ ತೀರ್ಮಾನ ಕೈಗೊಂಡಿದೆ....

ಅಬಕಾರಿ ಸಚಿವ R.B ತಿಮ್ಮಾಪುರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಅಬಕಾರಿ ಸಚಿವ R.B ತಿಮ್ಮಾಪುರ ವಿರುದ್ಧ ಲೋಕಾಯುಕ್ತಕ್ಕೆ ದೂರು

by Shwetha
January 20, 2026
0

ಬಾರ್ ಲೈಸೆನ್ಸ್ ನೀಡುವ ವಿಚಾರದಲ್ಲಿ ಲಂಚ ಕೇಳಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಅಬಕಾರಿ ಸಚಿವ R.B ತಿಮ್ಮಾಪುರ ವಿರುದ್ಧ ಲೋಕಾಯುಕ್ತಕ್ಕೆ ಅಧಿಕೃತ ದೂರು ಸಲ್ಲಿಕೆಯಾಗಿದೆ. ಲಕ್ಷ್ಮೀನಾರಾಯಣ ಎಂಬವರು...

ನಾಲಿಗೆ ಹರಿಬಿಟ್ಟು ಸಂಕಷ್ಟಕ್ಕೆ ಸಿಲುಕಿದ ಶ್ರೀರಾಮುಲು: ಬಾಲಕಿಯ ಗುರುತು ಬಹಿರಂಗಪಡಿಸಿ ಪೋಕ್ಸೊ ಬಲೆಗೆ ಬಿದ್ದ ಮಾಜಿ ಸಚಿವ

ನಾಲಿಗೆ ಹರಿಬಿಟ್ಟು ಸಂಕಷ್ಟಕ್ಕೆ ಸಿಲುಕಿದ ಶ್ರೀರಾಮುಲು: ಬಾಲಕಿಯ ಗುರುತು ಬಹಿರಂಗಪಡಿಸಿ ಪೋಕ್ಸೊ ಬಲೆಗೆ ಬಿದ್ದ ಮಾಜಿ ಸಚಿವ

by Shwetha
January 20, 2026
0

ಬಳ್ಳಾರಿ: ಇರಲಾರದೆ ಇರುವೆ ಬಿಟ್ಕೊಳೋದು ಅಂದ್ರೆ ಇದೆನಾ ಎಂಬಂತಾಗಿದೆ ಮಾಜಿ ಸಚಿವ ಬಿ. ಶ್ರೀರಾಮುಲು ಅವರ ಪರಿಸ್ಥಿತಿ. ರಾಜ್ಯ ರಾಜಕಾರಣದಲ್ಲಿ ಸದಾ ಸುದ್ದಿಯಲ್ಲಿರುವ ಗಣಿ ಜಿಲ್ಲೆ ಬಳ್ಳಾರಿಯಲ್ಲಿ,...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram