Chhattisgarh : ಊಟ ಬಡಿಸಲು ನಿರಾಕರಿಸಿದ್ದಕ್ಕೆ ಪತ್ನಿ ಕೊಲೆ…
ರಾತ್ರಿ ಊಟ ಬಡಿಸಲು ನಿರಾಕರಿಸಿದ ಪತ್ನಿಯನ್ನ ಕೊಡಲಿಯಿಂದ ಕೊಂದ ಆರೋಪದ ಮೇಲೆ ಛತ್ತೀಸ್ಗಢ ಪೊಲೀಸರು ವ್ಯಕ್ತಿಯೊಬ್ಬನನ್ನ ಬಂಧಿಸಿದ್ದಾರೆ. ಕೊರ್ಬಾದ ಖಾಸಗಿ ಕ್ಲಿನಿಕ್ನಲ್ಲಿ ಕಾಂಪೌಂಡರ್ ಆಗಿರುವ ಯೋಗೇಂದ್ರ ಶ್ರೀವಾಸ್ (38) ಕೆಲಸ ಮುಗಿಸಿ ಮನೆಗೆ ಬಂದು ಪುಸ್ತಕ ಓದುತ್ತಿದ್ದಾಗ ಪತ್ನಿಗೆ ಊಟ ಬಡಿಸುವಂತೆ ಕೇಳಿದ್ದಾನೆ. ಪತ್ನಿ ಮಂಜೀತಾ ಶ್ರೀವಾಸ್ (32) ಊಟ ಬಡಿಸಲು ನಿರಾಕರಿಸಿದ ಕಾರಣ ದಂಪತಿಗಳ ನಡುವೆ ಜಗಳ ನಡೆದಿದೆ.
ಕೋಪದ ಭರದಲ್ಲಿ ಯೋಗೇಂದ್ರ ಪತ್ನಿ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿದ್ದಾನೆ. ತಾಯಿಯ ಕಿರುಚಾಟ ಕೇಳಿದ 8 ವರ್ಷದ ಮಗ ಮತ್ತು 10 ವರ್ಷದ ಮಗಳು ಓಡಿಬಂದು ನೋಡಿದಾಗ ತಾಯಿ ರಕ್ತದ ಮಡುವಿನಲ್ಲಿ ಬಿದ್ದಿದ್ದಾರೆ. ತಾಯಿ ಕೊಲೆಯಾದ ಬಗ್ಗೆ ಮಕ್ಕಳು ಅಕ್ಕಪಕ್ಕದ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಆದರೆ ಪತಿ ಯೋಗೇಂದ್ರ ಪೊಲೀಸರಿಗೆ ಸ್ವತಃ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಪೊಲೀಸರ ಪ್ರಕಾರ, ದಂಪತಿಗಳ ನಡುವೆ ಆಗಾಗ್ಗೆ ಸಣ್ಣಪುಟ್ಟ ವಿಷಯಗಳಿಗೆ ಜಗಳವಾಗುತ್ತಿತ್ತು. ಕೊಲೆ ಆರೋಪಿಯು ತನ್ನ ಹೆಂಡತಿಯ ವಾದ ಮಾಡುವ ಸ್ವಭಾವದಿಂದ ಸಮಸ್ಸೆ ಹೊಂದಿದ್ದ ಎನ್ನಲಾಗಿದೆ.
Chhattisgarh: Wife killed for refusing to serve food…