CM ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೃದಯಾಘಾತದಿಂದ ನಿಧನ..
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಮಾಧ್ಯಮ ಸಂಯೋಜಕರಾದ ಗುರುಲಿಂಗ ಸ್ವಾಮಿ ಹೊಳಿಮಠ ಹೃದಯಾಘಾತದಿಂದಾಗಿ ಸಾವನ್ನಪ್ಪಿದ್ದಾರೆ.
ಮೂಲತಃ ರಾಮದುರ್ಗದ ಮೂಲದವರಾದ ಗುರುಲಿಂಗಸ್ವಾಮಿ ಹೊಳಿ ಜಿಮ್ ಗೆ ಹೋದಾಗ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.
ಬೆಳಗ್ಗೆ ಜಿಮ್ಗೆ ಹೊಗಿ ವರ್ಕೌಟ್ ಮಾಡುವಾಗ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮದ್ಯೆ ನಿಧನ ಹೊಂದಿದ್ದಾರೆ.
ನಾಗರಭಾವಿ ಯುನಿಟಿ ಲೈಫ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಬಸವರಾಜ್ ಬೊಮ್ಮಾಯಿ ಗೃಹ ಸಚಿವರಾದಾಗಿಂದ ಮಾಧ್ಯಮ ವರ್ಗವನ್ನ ಗುರುಲಿಂಗ ಸ್ವಾಮಿ ನೋಡಿಕೊಳ್ಳುತ್ತಿದ್ದರು.
Chief Minister Basavaraj Bommai’s media coordinator Gurulinga Swami Holimath died of a heart attack.