Chikkaballapur : ಹೊಸ ವರ್ಷಾಚರಣೆಗೆ ನಿರ್ಬಂಧ : ಪೊಲೀಸರಿಂದ ಎಚ್ಚರಿಕೆ…
ಹೊಸ ವರ್ಷದ ಆಚರಣೆ ನಿರ್ಬಂಧಕ್ಕೆ ಸಂಬಂಧಿಸಿದಂರೆ ನಂದಿ ಗಿರಿದಾಮದ ಸುತ್ತಾಮುತ್ತಾ ಬಾರ್ ಅಂಡ್ ರೆಸ್ಟೋರೆಂಟ್ ಮಾಲಿಕರಿಗೆ ಚಿಕ್ಕಬಳ್ಳಾಪುರ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಹೊಸವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ನೂತನ ಗೈಡ್ ಲೈನ್ಸ್ ಪಾಲಿಸಲು ಚಿಕ್ಕಬಳ್ಳಾಪುರ ತಾಲ್ಲೂಕಿನ ವಿಶ್ವ ವಿಖ್ಯಾತ ನಂದಿಗಿರಿಧಾಮ ಸುತ್ತಮುತ್ತಲಿನ ಪ್ರದೇಶದ ಬಾರ್ ಅಂಡ್ ರೆಸ್ಟೋರೆಂಟ್ ಹಾಗೂ ರೆಸಾರ್ಟ್ ಮಾಲೀಕರ ಸಭೆಯನ್ನು ಚಿಕ್ಕಬಳ್ಳಾಪುರ ನಗರದ ಪೊಲೀಸ್ ಭವನದಲ್ಲಿ ಏರ್ಪಡಿಸಲಾಗಿತ್ತು..
ಈ ವೇಳೆ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಚಿಕ್ಕಬಳ್ಳಾಪುರ ವಿಭಾಗದ ಡಿವೈಎಸ್ಪಿ ವಾಸುದೇವ್ ಖಡಕ್ ಎಚ್ಚರಿಕೆ ನೀಡಿದರು. ಬಾರ್ ಅಂಡ್ ರೆಸ್ಟೋರೆಂಟ್ ರೆಸಾರ್ಟ್ ಮಾಲೀಕರು ಹೊಸ ವರ್ಷಾಚರಣೆಗೆ ಸರ್ಕಾರವಿಧಿಸಿರುವ ಕೋವಿಡ್ 19 ನೂತನ ನಿಯಮಗಳನ್ನು ಮೀರುವಂತಿಲ್ಲ ಎಂದರು.
ಡಿಸೆಂಬರ್ 31 ರಂದು ರಾತ್ರಿ 10-30 ಯಿಂದ 11.30 ರ ವರಗೆ ರೆಸ್ಟೋರೆಂಟ್ ಗಳಿಗೆ ಅವಕಾಶವಿದೆ. ರಾತ್ರಿ ಒಂದು ಗಂಟೆಯ ವರೆಗೆ ಬೆಂಗಳೂರಿನಲ್ಲಿ ಪಾರ್ಟಿ ಮಾಡಲು ಅವಕಾಶವಿದ್ದು.. ಯಾರಾದರೂ ಸರ್ಕಾರದ ನಿಯಮ ಉಲ್ಲಂಘನೆ ಮಾಡಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದು ಚಿಕ್ಕಬಳ್ಳಾಪುರ ಸರ್ಕಲ್ ಇನ್ಸ್ಪೆಕ್ಟರ್ ರಾಜು ತಿಳಿಸಿದರು.
Chikkaballapur: Restrictions on New Year celebrations: Police warn…