ADVERTISEMENT
Saturday, September 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

Chikkaballapur | ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಆರೋಗ್ಯ ಮೇಳ: ಜಗತ್ತಿನ ಬೃಹತ್ ಆರೋಗ್ಯ ಮೇಳ

Mahesh M Dhandu by Mahesh M Dhandu
May 14, 2022
in Health, Newsbeat, ಆರೋಗ್ಯ
Chikkaballapur World Book of Records Health Fair World's Largest Health Fair saaksha tv

Chikkaballapur World Book of Records Health Fair World's Largest Health Fair saaksha tv

Share on FacebookShare on TwitterShare on WhatsappShare on Telegram

Chikkaballapur | ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಆರೋಗ್ಯ ಮೇಳ: ಜಗತ್ತಿನ ಬೃಹತ್ ಆರೋಗ್ಯ ಮೇಳ

ಚಿಕ್ಕಬಳ್ಳಾಪುರ : ಅಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆದ್ಯತೆ ನೀಡಿರುವ ರಾಜ್ಯ ಸರ್ಕಾರ, ತಪಾಸಣೆ ಹಾಗೂ ಚಿಕಿತ್ಸೆಗೆ ಸೂಕ್ತ ಸೌಲಭ್ಯ ಕಲ್ಪಿಸಿದೆ. ಪ್ರತಿಯೊಬ್ಬರೂ ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿದರೆ ರೋಗ ನಿವಾರಣೆಗೆ ಅರ್ಧ ಪರಿಹಾರ ಆಗಲೇ ದೊರೆಯುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕಿವಿಮಾತು ಹೇಳಿದರು.

Related posts

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

September 18, 2026
ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

September 18, 2026

ಚಿಕ್ಕಬಳ್ಳಾಪುರದ ಶ್ರೀ ಆದಿಚುಂಚನಗಿರಿ ಟ್ರಸ್ಟ್, ಬಾಲಗಂಗಾಧರನಾಥ ಸ್ವಾಮೀಜಿ ಕ್ಯಾಂಪಸ್‍ನಲ್ಲಿ ಏರ್ಪಡಿಸಿರುವ ಎರಡು ದಿನಗಳ (ಮೇ 14, 15) ಬೃಹತ್ ಆರೋಗ್ಯ ಮೇಳದಲ್ಲಿ ಸಚಿವರು ಮಾತನಾಡಿದರು.

ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್ ಮೊದಲಾದ ಅಸಾಂಕ್ರಾಮಿಕ ರೋಗಗಳನ್ನು ಪತ್ತೆ ಮಾಡಿ ಅದಕ್ಕೆ ಸೂಕ್ತ ಚಿಕಿತ್ಸೆ ನೀಡಲು ಸರ್ಕಾರ ಆದ್ಯತೆ ನೀಡಿದೆ. ಜನರು ಆರೋಗ್ಯ ತಪಾಸಣೆ ಮಾಡಿಸಿಕೊಂಡು ರೋಗ ಗುರುತಿಸಿದರೆ ಅರ್ಧ ಸಮಸ್ಯೆಗೆ ಪರಿಹಾರ ದೊರೆಯುತ್ತದೆ. 30 ವರ್ಷ ಮೇಲ್ಪಟ್ಟ ಪ್ರತಿ ವ್ಯಕ್ತಿ ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.

ಕಳೆದ ನೂರು ವರ್ಷಗಳಲ್ಲೇ ಕೋವಿಡ್‍ನಂತಹ ಸಾಂಕ್ರಾಮಿಕವನ್ನು ಸರ್ಕಾರ ಎದುರಿಸಿರಲಿಲ್ಲ. ಅದನ್ನು ನಿಯಂತ್ರಣ ಮಾಡುವ ಸವಾಲು ಮತ್ತು ಅವಕಾಶ ನನಗೆ ದೊರೆತಿದ್ದು, ಅದನ್ನು ಅತ್ಯಂತ ಪ್ರಾಮಾಣಿಕತೆಯಿಂದ ನಿಭಾಯಿಸಿದ್ದೇನೆ. ಅಭಿವೃದ್ಧಿಶೀಲ ದೇಶಗಳಲ್ಲಿ ಇಂತಹ ಸಾಂಕ್ರಾಮಿಕ ನಿರ್ವಹಿಸಲು ಸಾಧ್ಯವಾಗುವುದಿಲ್ಲ ಎಂದು ಕೆಲ ವಿದೇಶಿ ಮಾಧ್ಯಮಗಳು ವ್ಯಾಖ್ಯಾನ ಮಾಡಿದ್ದವು. ಆದರೆ ಪ್ರಧಾನಿ ನರೇಂದ್ರ ಮೋದಿಯವರು, ಇದರ ನೇತೃತ್ವ ವಹಿಸಿ ಸೂಕ್ತ ಕ್ರಮ ಕೈಗೊಂಡರು. ಎಲ್ಲಾ ಮುಖ್ಯಮಂತ್ರಿಗಳು, ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆರೋಗ್ಯ ಸಿಬ್ಬಂದಿಗೆ ಆತ್ಮವಿಶ್ವಾಸ ತುಂಬಿ ತಯಾರು ಮಾಡಿದರು. ಆರಂಭದಲ್ಲಿ ದೇಶದಲ್ಲಿ ಸರಿಯಾಗಿ ಪಿಪಿಇ ಕಿಟ್, ಮಾಸ್ಕ್, ಲಸಿಕೆ ಇರಲಿಲ್ಲ. ಆದರೆ ಪ್ರಧಾನಿಗಳ ದೃಢ ಸಂಕಲ್ಪದಿಂದ ಬೇರೆ ದೇಶಗಳಿಗೂ ಲಸಿಕೆ ಪೂರೈಸುವ ಮಟ್ಟಿಗೆ ಆರೋಗ್ಯ ಕ್ಷೇತ್ರದಲ್ಲಿ ಪ್ರಗತಿ ಕಂಡುಬಂತು ಎಂದರು.

Chikkaballapur World Book of Records Health Fair World's Largest Health Fair saaksha tv
Chikkaballapur World Book of Records Health Fair World’s Largest Health Fair saaksha tv

ಪ್ರಧಾನಿ ನರೇಂದ್ರ ಮೋದಿಯವರು 130 ಕೋಟಿ ಜನರನ್ನು ಕೋವಿಡ್ ವಿರುದ್ಧದ ಹೋರಾಟಕ್ಕೆ ಅಣಿಗೊಳಿಸಿದ್ದರಿಂದಾಗಿ ಅರ್ಧ ಹೋರಾಟ ಗೆಲ್ಲಲು ಸಾಧ್ಯವಾಯಿತು. ರಾಜ್ಯದಲ್ಲಿ ಈವರೆಗೆ 10.80 ಕೋಟಿ ಲಸಿಕೆ ನೀಡಲಾಗಿದೆ. ಮೊದಲ ಡೋಸ್ 100%, ಎರಡನೇ ಡೋಸ್ 98% ಪ್ರಗತಿ ಕಂಡಿದೆ. ಮೂರನೇ ಡೋಸ್ ಕೂಡ 70% ಪ್ರಗತಿಯಾಗಿದೆ. ಈ ಎಲ್ಲಾ ಸಾಧನೆಗೆ ಪ್ರಧಾನಿಗಳ ನಾಯಕತ್ವ ಕಾರಣ ಎಂದರು.

ಒಂದು ಜಿಲ್ಲೆಯಲ್ಲಿರುವ ಜನರಿಗೆ ಉತ್ತಮವಾಗಿ ಆರೋಗ್ಯ ತಪಾಸಣೆ, ಚಿಕಿತ್ಸೆ ನೀಡಲು ಬೃಹತ್ ಆರೋಗ್ಯ ಮೇಳ ಏರ್ಪಡಿಸಲಾಗಿದೆ. 14 ಖಾಸಗಿ ವೈದ್ಯಕೀಯ ಕಾಲೇಜು, 20 ಖಾಸಗಿ ಆಸ್ಪತ್ರೆ, 12 ಕಣ್ಣಿನ ಆಸ್ಪತ್ರೆ ಸೇರಿದಂತೆ ಹಲವು ಸಂಸ್ಥೆಗಳ ವೈದ್ಯರು ಮೇಳದಲ್ಲಿ ಪಾಲ್ಗೊಂಡಿದ್ದಾರೆ. ತಪಾಸಣೆ ಬಳಿಕ ರೆಫರಲ್ ಮಾಡಿ ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತವಾಗಿ ಚಿಕಿತ್ಸೆ ಒದಗಿಸಲಾಗುತ್ತದೆ ಎಂದು ತಿಳಿಸಿದರು.

ಆರು ತಿಂಗಳಲ್ಲಿ ಕಾರ್ಡ್

ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತ ವಿಮೆ ನೀಡಲಾಗುತ್ತಿದೆ. ಇಡೀ ದೇಶದಲ್ಲಿ ಸುಮಾರು 80 ಕೋಟಿ ಜನರಿಗೆ ಈ ಯೋಜನೆ ದೊರೆಯುತ್ತದೆ. ಇನ್ನು ಆರು ತಿಂಗಳಲ್ಲಿ ರಾಜ್ಯದ ಪ್ರತಿಯೊಬ್ಬರ ಅರ್ಹರಿಗೂ ಆಯುಷ್ಮಾನ್ ಕಾರ್ಡ್ ನೀಡಲು ಕ್ರಮ ವಹಿಸಲಾಗುವುದು ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ನಾನು ಕಾಲೇಜು ವ್ಯಾಸಂಗ ಮಾಡುತ್ತಿದ್ದಾಗ ನನ್ನ ತಾಯಿ ತೀವ್ರ ಹೃದಯಾಘಾತಕ್ಕೊಳಗಾಗಿದ್ದರು. ಮನೆಯಿಂದ ಆಸ್ಪತ್ರೆಗೆ ಅವರನ್ನು ಕರೆತರಲು ಒಂದು ಗಂಟೆ ಬೇಕಾಗಿತ್ತು. ಈ ಕಾರಣದಿಂದ ಅವರನ್ನು ಕಳೆದುಕೊಳ್ಳಬೇಕಾಯಿತು. ವೈದ್ಯ ಶಿಕ್ಷಣ ಪಡೆದಿದ್ದರೂ, ತಾಯಿಗೆ ನಿಯಮಿತ ಆರೋಗ್ಯ ತಪಾಸಣೆ ಮಾಡಿಸಬೇಕೆಂಬ ಅರಿವು ನನಗಿರಲಿಲ್ಲ. ಸಾಮಾನ್ಯ ಜನರಿಗೂ ಈ ಕುರಿತು ಅರಿವಿನ ಕೊರತೆ ಇದೆ ಎಂದರು.

Tags: #Saaksha TVChikkaballapurDr K Sudakar
ShareTweetSendShare
Join us on:

Related Posts

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

by admin
September 18, 2026
0

ಮೂರು ವಿಭಾಗಗಳಲ್ಲೂ ಚಿನ್ನದ ಪದಕ – ಕರ್ನಾಟಕಕ್ಕೆ ಹೆಮ್ಮೆಯ ಗೆಲುವು ಗುಂಟೂರು: ಆಂಧ್ರಪ್ರದೇಶದ ಗುಂಟೂರಿನ ಆಂಧ್ರ ಪ್ರದೇಶ್ STEM ಸ್ಕೂಲ್‌ನಲ್ಲಿ ಸೆಪ್ಟೆಂಬರ್ 11 ಮತ್ತು 12ರಂದು ನಡೆದ...

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

by Shwetha
September 18, 2026
0

ಬಾಗಲಕೋಟೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕೆಂದರೆ ಪಕ್ಷದಿಂದ ದೂರವಾಗಿರುವ ಬಂಡಾಯ ನಾಯಕರನ್ನು ಮತ್ತೆ ಮನೆಗೆ ಕರೆತರುವುದು ಅನಿವಾರ್ಯ ಎಂದು ಮಾಜಿ ಸಚಿವ ಮುರುಗೇಶ...

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

by Shwetha
September 18, 2026
0

ರಷ್ಯಾದಿಂದ ಕಚ್ಚಾತೈಲ ಮತ್ತು ನೈಸರ್ಗಿಕ ಅನಿಲ ಖರೀದಿಸುವ ದೇಶಗಳ ಮೇಲೆ ಆರ್ಥಿಕ ಒತ್ತಡ ಹೆಚ್ಚಿಸಲು ಅಮೆರಿಕ ಮಹತ್ವದ ಹೆಜ್ಜೆ ಇಟ್ಟಿದೆ. ರಷ್ಯಾ ವಿರುದ್ಧದ ನಿರ್ಬಂಧಗಳನ್ನು ಮತ್ತಷ್ಟು ಬಿಗಿಗೊಳಿಸುವ...

ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಒರೆಸಿದ್ರು : ಟಿ ನರಸೀಪುರ ಇನ್‌ಸ್ಪೆಕ್ಟರ್ ಧನಂಜಯ ವಿರುದ್ಧ ವರದಿಗಾರನ ಆಕ್ರೋಶ

ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಒರೆಸಿದ್ರು : ಟಿ ನರಸೀಪುರ ಇನ್‌ಸ್ಪೆಕ್ಟರ್ ಧನಂಜಯ ವಿರುದ್ಧ ವರದಿಗಾರನ ಆಕ್ರೋಶ

by Shwetha
September 18, 2026
0

ಮೈಸೂರು: ಟಿ ನರಸೀಪುರದ ಇನ್‌ಸ್ಪೆಕ್ಟರ್ ಧನಂಜಯ ಅವರ ವಿವಾದಾತ್ಮಕ ನಡೆ ಈಗ ಇಡೀ ಪೊಲೀಸ್ ಇಲಾಖೆಯನ್ನು ಮುಜುಗರಕ್ಕೀಡು ಮಾಡಿದೆ. ಗಣೇಶ ಮೆರವಣಿಗೆಗೆ ಸಂಬಂಧಿಸಿದಂತೆ ತಾವು ನೀಡಿದ್ದ ವಿವಾದಾತ್ಮಕ...

ರೇಷನ್ ಕಾರ್ಡ್ e-KYCಗೆ ಸೆಪ್ಟೆಂಬರ್ 30 ಗಡುವು: ಮಾಡಿಸದಿದ್ದರೆ ಏನಾಗಲಿದೆ?

ರೇಷನ್ ಕಾರ್ಡ್ e-KYC ಗಡುವು ವಿಸ್ತರಣೆ: ಅಕ್ಟೋಬರ್ 20ರವರೆಗೆ ಅವಕಾಶ, ನ್ಯಾಯಬೆಲೆ ಅಂಗಡಿ ಸಮಯವೂ ಬದಲಾವಣೆ

by Shwetha
September 18, 2026
0

ಕರ್ನಾಟಕದ ರೇಷನ್ ಕಾರ್ಡ್ ಫಲಾನುಭವಿಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಹತ್ವದ ಮಾಹಿತಿ ನೀಡಿದೆ. ರೇಷನ್ ಕಾರ್ಡ್‌ಗಳ e-KYC ಪೂರ್ಣಗೊಳಿಸಲು ನಿಗದಿಪಡಿಸಿದ್ದ ಸೆಪ್ಟೆಂಬರ್ 30ರ ಗಡುವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram