ಮಲನಾಡು ಚಿಕ್ಕಮಗಳೂರಿನಲ್ಲಿ ಕೊರೋನಾ ಹಾವಳಿ ಮುಂದುವರೆದಿದೆ. ಇಂದು ಒಂದೇ ದಿನ ಜಿಲ್ಲೆಯಲ್ಲಿ 41 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1087 ಕ್ಕೆ ತಲುಪಿದ್ದು, ಜಿಲ್ಲೆಯಲ್ಲಿ ಸದ್ಯ 614 ಸಕ್ರಿಯ ಪ್ರಕರಣಗಳಿದೆ. ಇನ್ನೂ ಇಂದು 11 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಜಿಲ್ಲೆಯಲ್ಲಿ ಈವರೆಗೂ ಗುಣಮುಖರಾದವರ ಸಂಖ್ಯೆ 440ಕ್ಕೇರಿದೆ. ಇಂದು ಹೊಸದಾಗಿ ಸೋಂಕು ಪತ್ತೆಯಾದವರ ಪೈಕಿ ಅಜ್ಜಂಪುರ 1, ಕಡೂರು 4, ತರೀಕೆರೆ 5, ಚಿಕ್ಕಮಗಳೂರು 30 ಕೇಸ್ ಗಳಿವೆ.
ಸಿಬಿಎಸ್ಇ 12ನೇ ತರಗತಿ ಫಲಿತಾಂಶ 2026: ವೆಬ್ಸೈಟ್, ಡಿಜಿಲಾಕರ್ ಮತ್ತು ಉಮಾಂಗ್ ಆ್ಯಪ್ ಮೂಲಕ ರಿಸಲ್ಟ್ ನೋಡುವುದು ಹೇಗೆ?
ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು 2026ನೇ ಸಾಲಿನ 12ನೇ ತರಗತಿ ಫಲಿತಾಂಶಗಳನ್ನು ಬಿಡುಗಡೆ ಮಾಡಲು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ. ಲಕ್ಷಾಂತರ ವಿದ್ಯಾರ್ಥಿಗಳ ಎದಬಡಿತ ಹೆಚ್ಚಾಗಿದ್ದು, ಫಲಿತಾಂಶದ ಕ್ಷಣಗಣನೆ...








