ಮಲನಾಡು ಚಿಕ್ಕಮಗಳೂರಿನಲ್ಲಿ ಕೊರೋನಾ ಹಾವಳಿ ಮುಂದುವರೆದಿದೆ. ಇಂದು ಒಂದೇ ದಿನ ಜಿಲ್ಲೆಯಲ್ಲಿ 41 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1087 ಕ್ಕೆ ತಲುಪಿದ್ದು, ಜಿಲ್ಲೆಯಲ್ಲಿ ಸದ್ಯ 614 ಸಕ್ರಿಯ ಪ್ರಕರಣಗಳಿದೆ. ಇನ್ನೂ ಇಂದು 11 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಜಿಲ್ಲೆಯಲ್ಲಿ ಈವರೆಗೂ ಗುಣಮುಖರಾದವರ ಸಂಖ್ಯೆ 440ಕ್ಕೇರಿದೆ. ಇಂದು ಹೊಸದಾಗಿ ಸೋಂಕು ಪತ್ತೆಯಾದವರ ಪೈಕಿ ಅಜ್ಜಂಪುರ 1, ಕಡೂರು 4, ತರೀಕೆರೆ 5, ಚಿಕ್ಕಮಗಳೂರು 30 ಕೇಸ್ ಗಳಿವೆ.
ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...








