ಚಿಕ್ಕಮಗಳೂರು: ಕಳೆದೆರೆಡು ದಿನಗಳಿಂದ ಕಾಫಿನಾಡು ಚಿಕ್ಕಮಗಳೂರಿನಲ್ಲಿ ವರುಣನ ಅಬ್ಬರ ಜೋರಾಗಿದೆ. ವರುಣನ ರೌದ್ರಾವತಾರಕ್ಕೆ ಜಿಲ್ಲೆಯಲ್ಲಿ ಸಾಕಷ್ಟು ಅನಾಹುತಗಳು ಸಂಭವಿಸಿದೆ. ಅಲ್ಲಲ್ಲಿ ಗುಡ್ಡ ಕುಸಿತ, ಮರ ಕುಸಿತ, ಮನೆಗಳಿಗೆ ಹಾನಿಯಾಗಿದೆ. ಇನ್ನೂ ಪ್ರತಿ ಬಾರಿ ಮಳೆಗಾಲದಲ್ಲಿ ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತವಾಗುತ್ತಲೇ ಇರುತ್ತೆ. ಇದೀಗ ಮತ್ತೆ ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿರುವ ಚಾರ್ಮಾಡಿ ಘಾಟ್ ನ ಮೂರು ಕಡೆಗಳಲ್ಲಿ ಗುಡ್ಡ ಕುಸಿತವಾಗಿದ್ದು, ಸಂಚಾರವನ್ನ ಬಂದ್ ಮಾಡಲಾಗಿದೆ. ಚಿಕ್ಕಮಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ರಸ್ತೆಗೆ ಗುಡ್ಡ ಕುಸಿದಿದ್ದು, ಜಿಲ್ಲಾಡಳಿತದಿಂದ ಮಣ್ಣು ತೆರವು ಕಾರ್ಯಾಚರಣೆ ಕಾರ್ಯಾಚರಣೆ ಚಾಲ್ತಿಯಲ್ಲಿದೆ. ಮಣ್ಣು ತೆರವು ಕಾರ್ಯಾಚರನೆಯಲ್ಲಿ ಜೆಸಿಬಿಗಳನ್ನು ಬಳಸಿಕೊಳ್ಳಲಾಗಿದೆ. ಈಗಾಗಲೇ ಮಳೆಯಿಂದಾಗಿ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಅನಾಹುತ ಸಂಭವಿಸಿದೆ. ಬಿಟ್ಟು ಬಿಡದೇ ಸುರಿಯುತ್ತಿರುವ ಗಾಳಿ ಸಹಿತ ಭಾರೀ ಮಳೆಗೆ ಗುಡ್ಡ ಕುಸಿಯುತ್ತಿದೆ. ಅಲ್ಲಲ್ಲಿ ವಿದ್ಯುತ್ ಕಂಬಗಳು ಧರೆಗುರುಳುತ್ತಿದ್ದು, ಈಗಾಗಲೇ ಪ್ರವಾಹಕ್ಕೆ ಜಿಲ್ಲೆಯಲ್ಲಿ ಒಂದು ಬಲಿಯಾಗಿದೆ. ಇನ್ನೂ ಮಳೆ ಹೀಗೇ ಮುಂದುವರೆದಲ್ಲಿ ಪ್ರವಾಹ ಉಂಟಾಗಿ ಭಾರೀ ಪ್ರಮಾಣದ ತೊಂದರೆಗಳಾಗುವ ಸಾಧ್ಯತೆಯಿದೆ.
ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’
ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್ಎಸ್ಎಸ್ ಸಹ ಒಪ್ಪಿಗೆ...








