ಚಿಕ್ಕಮಗಳೂರು: ಕಳೆದೆರೆಡು ದಿನಗಳಿಂದ ಕಾಫಿನಾಡು ಚಿಕ್ಕಮಗಳೂರಿನಲ್ಲಿ ವರುಣನ ಅಬ್ಬರ ಜೋರಾಗಿದೆ. ವರುಣನ ರೌದ್ರಾವತಾರಕ್ಕೆ ಜಿಲ್ಲೆಯಲ್ಲಿ ಸಾಕಷ್ಟು ಅನಾಹುತಗಳು ಸಂಭವಿಸಿದೆ. ಅಲ್ಲಲ್ಲಿ ಗುಡ್ಡ ಕುಸಿತ, ಮರ ಕುಸಿತ, ಮನೆಗಳಿಗೆ ಹಾನಿಯಾಗಿದೆ. ಇನ್ನೂ ಪ್ರತಿ ಬಾರಿ ಮಳೆಗಾಲದಲ್ಲಿ ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತವಾಗುತ್ತಲೇ ಇರುತ್ತೆ. ಇದೀಗ ಮತ್ತೆ ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿರುವ ಚಾರ್ಮಾಡಿ ಘಾಟ್ ನ ಮೂರು ಕಡೆಗಳಲ್ಲಿ ಗುಡ್ಡ ಕುಸಿತವಾಗಿದ್ದು, ಸಂಚಾರವನ್ನ ಬಂದ್ ಮಾಡಲಾಗಿದೆ. ಚಿಕ್ಕಮಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ರಸ್ತೆಗೆ ಗುಡ್ಡ ಕುಸಿದಿದ್ದು, ಜಿಲ್ಲಾಡಳಿತದಿಂದ ಮಣ್ಣು ತೆರವು ಕಾರ್ಯಾಚರಣೆ ಕಾರ್ಯಾಚರಣೆ ಚಾಲ್ತಿಯಲ್ಲಿದೆ. ಮಣ್ಣು ತೆರವು ಕಾರ್ಯಾಚರನೆಯಲ್ಲಿ ಜೆಸಿಬಿಗಳನ್ನು ಬಳಸಿಕೊಳ್ಳಲಾಗಿದೆ. ಈಗಾಗಲೇ ಮಳೆಯಿಂದಾಗಿ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಅನಾಹುತ ಸಂಭವಿಸಿದೆ. ಬಿಟ್ಟು ಬಿಡದೇ ಸುರಿಯುತ್ತಿರುವ ಗಾಳಿ ಸಹಿತ ಭಾರೀ ಮಳೆಗೆ ಗುಡ್ಡ ಕುಸಿಯುತ್ತಿದೆ. ಅಲ್ಲಲ್ಲಿ ವಿದ್ಯುತ್ ಕಂಬಗಳು ಧರೆಗುರುಳುತ್ತಿದ್ದು, ಈಗಾಗಲೇ ಪ್ರವಾಹಕ್ಕೆ ಜಿಲ್ಲೆಯಲ್ಲಿ ಒಂದು ಬಲಿಯಾಗಿದೆ. ಇನ್ನೂ ಮಳೆ ಹೀಗೇ ಮುಂದುವರೆದಲ್ಲಿ ಪ್ರವಾಹ ಉಂಟಾಗಿ ಭಾರೀ ಪ್ರಮಾಣದ ತೊಂದರೆಗಳಾಗುವ ಸಾಧ್ಯತೆಯಿದೆ.
ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು
ಕನ್ನಡ ಚಿತ್ರರಂಗದ ವಿಭಿನ್ನ ಆಲೋಚನೆಗಳ ಸರದಾರ ರಿಯಲ್ ಸ್ಟಾರ್ ಉಪೇಂದ್ರ ಅವರು ಪ್ರಜಾಕೀಯ ಎಂಬ ಹೊಸ ರಾಜಕೀಯ ಕ್ರಾಂತಿಗೆ ನಾಂದಿ ಹಾಡಿದ್ದಾರೆ. ಪ್ರಜಾಕೀಯ ಪಕ್ಷ ಸ್ಥಾಪನೆಯಾದಾಗಿನಿಂದಲೂ ಎಲ್ಲರ...








