ಚಿಕ್ಕೋಡಿ ( chikkodi ) : ಕೊರೊನಾ ಮಧ್ಯೆ ಭಂಡಾರ ಜಾತ್ರೆ
ಬೆಳಗಾವಿ : ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಜೋರಾಗಿದೆ. ಪ್ರತಿನಿತ್ಯ ದೇಶದಲ್ಲಿ ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿದ್ದರೂ ಜನರು ಯಾಕೆ ಕೊರೊನಾವನ್ನ ಗಂಭೀರವಾಗಿ ತೆಗೆದುಕೊಂಡಂತೆ ಕಾಣುತ್ತಿಲ್ಲ.
ಯಾವುದೇ ಮುನ್ನೆಚ್ಚರಿಕಾ ಕ್ರಮಗಳನ್ನ ತೆಗೆದುಕೊಳ್ಳದೇ ಜನ ಜಾತ್ರೆಗಳಲ್ಲಿ ಭಾಗಿಯಾಗುತ್ತಿದ್ದಾರೆ. ಇದಕ್ಕೆ ಸಾಕ್ಷಿ ಚಿಕ್ಕೋಡಿ ತಾಲೂಕಿನ ಕೆರೂರ ಗ್ರಾಮದಲ್ಲಿ ನಡೆದ ಜಾತ್ರೆ..!
ಹೌದು..! ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರ ಗ್ರಾಮದಲ್ಲಿ ಕೊರೊನಾ ನಿಯಮಗಳನ್ನ ಗಾಳಿಗೆ ತೂರಿ ಶ್ರೀ ಅರಣ್ಯಸಿದ್ದೇಶ್ವರ ಭಂಡಾರ ಜಾತ್ರೆ ನಡೆಸಲಾಗಿದೆ.
ಈ ಜಾತ್ರಾ ಮಹೋತ್ಸವದಲ್ಲಿ 10 ಸಾವಿರಕ್ಕೂ ಅಧಿಕ ಮಂದಿ ಭಾಗಿಯಾಗಿದ್ದಾರೆ. ಆದರೆ ಜಾತ್ರೆಗಳನ್ನ ತಡೆಯುವಲ್ಲಿ ಜಿಲ್ಲಾಡಳಿತ ಹಾಗೂ ತಾಲೂಕಾಡಳಿತ ವಿಫಲವಾಗಿದೆ.
ಅದರಲ್ಲೂ ಮಹಾರಾಷ್ಟ್ರದಿಂದಲೂ ಭಕ್ತರು ಈ ಜಾತ್ರೆಗೆ ಆಗಮಿಸುತ್ತಾರೆ. ಇದು ಕೂಡ ಕೊರೊನಾ ಭೀತಿಯನ್ನ ಹೆಚ್ಚಿಸಿದೆ.