ಚಿಕ್ಕಮಗಳೂರು : ಗೋ ಮಾಂಸ ಸಾಗಾಟ.. ಇಬ್ಬರ ಬಂಧನ Chikmagalur
ಚಿಕ್ಕಮಗಳೂರು : ಗೋ ಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಾಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ಕಡ್ಲೆಮಕ್ಕಿ ಗ್ರಾಮದ ಇಬ್ರಾಹಿಂ ಹಾಗೂ ಷರೀಫ್ ಎಂದು ಗುರುತಿಸಲಾಗಿದೆ.
ಇವರು ಹಸುವನ್ನ ಕೊಂದು ಮಾಂಸ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಆಟೋ ಸಮೇತ ಸಿಕ್ಕಿಬಿದ್ದಿದ್ದಾರೆ.
ಇವರು ಅಕ್ರಮವಾಗಿ ಹಸುವನ್ನ ಕೊಂಡು ಕಾಡಿನಲ್ಲಿ ಮಾಂಸ ಮಾಡಿಕೊಂಡು ಮಾರಾಟಕ್ಕೆ ಯತ್ನಿಸುತ್ತಿದ್ದರು.
ಮಾಂಸವನ್ನ ಲಗೇಜ್ ಆಟೋದಲ್ಲಿ ತಂದು ಮಾರ್ಗ ಮಧ್ಯೆ ಸಿಗುವ ಹಳ್ಳಿಗಳಲ್ಲಿ ಮಾರಾಟಕ್ಕೆ ಮುಂದಾಗಿದ್ದರು.
ಈ ವಿಷಯ ತಿಳಿದ ಸ್ಥಳಿಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಸ್ಥಳಕ್ಕೆ ಬಂದ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ. ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.