ಅನೇಕಲ್: 24 ವರ್ಷದ ಯುವಕನೊಂದಿಗೆ 14 ವರ್ಷದ ಬಾಲಕಿಯನ್ನು ಮದುವೆ ಮಾಡಿರುವ ಘಟನೆ ನಡೆದಿದೆ.
ಸರ್ಜಾಪುರದಲ್ಲಿ ಈ ಘಟನೆ ನಡೆದಿದ್ದು, ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯನ್ನು ಆಕೆಯ ಪೋಷಕರಿಗೆ ತಿಳಿಸಿದೆ ಬಾಲ್ಯವಿವಾಹ ಮಾಡಿದ್ದಾರೆ ಎನ್ನಲಾಗಿದೆ. ಬಾಲಕಿಯ ದೊಡ್ಡಪ್ಪ ಮತ್ತು ದೊಡ್ಡಮ್ಮ ಸೇರಿ 24 ವರ್ಷದ ಯುವಕನ ಜೊತೆ ಕೈವಾರದಲ್ಲಿನ ಯಲ್ಲಮ್ಮ ದೇವಿ ದೇವಾಲಯದಲ್ಲಿ ಬಾಲ್ಯ ವಿವಾಹ ಮಾಡಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಹಲಸಿನಕಾಯಿಪುರ ಗ್ರಾಮದ ವಿನೋದ್ ಕುಮಾರ್ ಎಂಬಾತನೊಂದಿಗೆ ಮದುವೆ ಮಾಡಿದ್ದಾರೆ. ವಿನೋದ್ ಕುಮಾರ್ ತಂದೆ ಮುನಿಯಪ್ಪ, ತಾಯಿ ರತ್ನಮ್ಮ, ಅಣ್ಣ ವಿಜಯ್ ಕುಮಾರ್ ಮತ್ತು ಮುನಿಯಪ್ಪ, ವೆಂಕಟಮ್ಮ ಸೇರಿ ಮದುವೆ ಮಾಡಿಸಿದ್ದಾರೆ. ಅಪ್ರಾಪ್ತ ವಯಸ್ಕಳೆಂದು ಗೊತ್ತಿದ್ದರೂ ಮದುವೆ ಮಾಡಿಸಲಾಗಿದೆ ಎಂದು ಬಾಲಕಿಯ ತಾಯಿ ದೂರು ನೀಡಿದ್ದಾರೆ. ಸದ್ಯ ಈ ಕುರಿತು ಅಧಿಕಾರಿಗಳು ತನಿಖೆ ನಡೆಸಿದ್ದಾರೆ.