Chitradurga | ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ
ಚಿತ್ರದುರ್ಗ : ಕ್ಷುಲ್ಲಕ ಕಾರಣಕ್ಕೆ ಇಬ್ಬರ ಯುವಕರ ನಡುವೆ ಜಗಳವಾಗಿ ಯುವಕನಿಗೆ ಚಾಕು ಇರಿದಿರುವ ಘಟನೆ ಚಿತ್ರದುರ್ಗ ನಗರದಲ್ಲಿ ನಡೆದಿದೆ.
35 ವರ್ಷದ ಸಮಿಹುಲ್ಲಾ ಚಾಕು ಇರಿತಕ್ಕೆ ಒಳಗಾಗಿರುವ ವ್ಯಕ್ತಿಯಾಗಿದ್ದಾರೆ.
ಗುರಾಯಿಸಿ ನೋಡಿದ ಕಾರಣ ಪ್ರಶ್ನೆ ಮಾಡಿದ್ದಕ್ಕೆ ಸಮೆಹುಲ್ಲಾಗೆ ಚಾಕು ಇರಿಯಲಾಗಿದೆ.
ಚಾಕು ಇರಿತಕ್ಕೆ ಒಳಗಾದ ಯುವಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚಿತ್ರದುರ್ಗ ನಗರದ ಬಸವೇಶ್ವರ ಆಸ್ಪತ್ರೆಯಲ್ಲಿ ಸಮಿಹುಲ್ಲಾಗೆ ಚಿಕಿತ್ಸೆ ಮುಂದುವರೆದಿದೆ.
ನೂತನ್ ಎಂಬ ಯುವಕನಿಂದ ಸಮಿಹುಲ್ಲಾ ಗೆ ಚಾಕುವಿನಿಂದ ಇರಿದಿದ್ದಾನೆ.
ಘಟನೆ ಬಳಿಕ ತಲೆ ಮರೆಸಿಕೊಂಡಿರುವ ಆರೋಪಿ ನೂತನ್ ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.