ಚಿತ್ರದುರ್ಗ ಜಿಲ್ಲೆಯಲ್ಲಿ ಕೃಷಿ ಯಾಂತ್ರೀಕರಣ ಯೋಜನೆ ಜಾರಿ….
ರಾಜ್ಯ ಸರ್ಕಾರ ಕೃಷಿ ಕಲ್ಯಾಣಕ್ಕಾಗಿ ಜಾರಿಗೆ ತಂದಿರುವ ಕೃಷಿ ಯಾಂತ್ರೀಕರಣ ಯೋಜನೆ ಚಿತ್ರದುರ್ಗ ಜಿಲ್ಲೆಯ ರೈತರಿಗೆ ಅನೂಕೂಲವಾಗಿದ್ದು, ಕೃಷಿಕರು ಈ ಯೋಜನೆಯ ಲಾಭ ಪಡೆದುಕೊಳ್ಳುತ್ತಿದ್ದಾರೆ.
ಈ ಯೋಜನೆಯು ಕೃಷಿ ಕಾರ್ಮಿಕರ ಕೊರತೆಯನ್ನು ನೀಗಿಸಿ, ಸಕಾಲದಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳಲು ನೆರವಾಗುತ್ತದೆ. ಶ್ರಮದಾಯಕ ದುಡಿಮೆಯನ್ನು ತಗ್ಗಿಸಿ, ಉಳುಮೆಯಿಂದ ಕೊಯ್ಲಿನವರೆಗೆ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳನ್ನು ಖರೀದಿಸಲು ರೈತರಿಗೆ ಸಹಾಯಧನ ನೀಡಲಾಗುತ್ತಿದೆ.
ರೈತ ರಾಮಚಂದ್ರಪ್ಪ ಮಧ್ಯಮಗಳ ಜೊತೆ ತಾವು ಬಹಳ ವರ್ಷಗಳಿಂದ ರಾಗಿ ಬೆಳೆಯುತ್ತಿದ್ದು, ಕಟಾವು ಮಾಡಲು ಯಂತ್ರೋಪಕರಣ ಬಳಕೆ ಮಾಡುತ್ತಿರುವುದರಿಂದ ಖರ್ಚು ಕಡಿಮೆಯಾಗಿದೆ ಎಂದು ತಿಳಿಸಿದರು.
ಮತ್ತೋರ್ವ ರೈತ ಕೆ.ಸಿ.ಮಹೇಶ್ವರಪ್ಪ, ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಕೆಯಾಗುತ್ತಿದ್ದು, ರೈತರಿಗೆ ಸಾಕಷ್ಟು ಅನುಕೂಲವಾಗುತ್ತಿದೆ ಎಂದರು.
ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸಿ.ಎಸ್.ಈಶ, ರಾಜ್ಯ ಸರ್ಕಾರ ಕೃಷಿ ಯಾಂತ್ರೀಕರಣ ಯೋಜನೆಗಳಿಗೆ ಒತ್ತು ನೀಡುತ್ತಿದ್ದು, ರೈತರು ಈ ಯೋಜನೆ ಸದ್ಭಳಕೆ ಮಾಡಿಕೊಂಡರೆ ಖರ್ಚು ಕಡಿಮೆ ಆಗಲಿದೆ ಎಂದು ವಿವರಿಸಿದರು.
Chitradurga: Agricultural mechanization project implemented in Chitradurga district….