ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಚಿತ್ರದುರ್ಗ – ಸೋಂಕು ನಿಯಂತ್ರಣದಲ್ಲಿ ಮಾರ್ಗಸೂಚನೆ ಪಾಲನೆ ಆಗುತ್ತಿಲ್ಲ : ಸಚಿವ ಸುಧಾಕರ್‌ ಕೆಂಡಾಮಂಡಲ

admin by admin
May 20, 2021
in Newsbeat, State, ರಾಜ್ಯ
dr sudhakar saakshatv chitradurga
Share on FacebookShare on TwitterShare on WhatsappShare on Telegram

ಚಿತ್ರದುರ್ಗ – ಸೋಂಕು ನಿಯಂತ್ರಣದಲ್ಲಿ ಮಾರ್ಗಸೂಚನೆ ಪಾಲನೆ ಆಗುತ್ತಿಲ್ಲ : ಸಚಿವ ಸುಧಾಕರ್‌ ಕೆಂಡಾಮಂಡಲ

dr sudhakar chitradurga saakshatvಚಿತ್ರದುರ್ಗ : ಕೋವಿಡ್‌ ನಿಯಂತ್ರಣದಲ್ಲಿ ಸರ್ಕಾರದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡದ ಕಾರಣಕ್ಕೆ ಜಿಲ್ಲೆಯಲ್ಲಿ ಸೋಂಕು ಏರಿಕೆ ಗತಿಯಲ್ಲಿದೆ. ತಕ್ಷಣವೇ ಜಿಲ್ಲಾಡಳಿತ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ.

Related posts

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

August 4, 2026
ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

August 4, 2026

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೋವಿಡ್‌ ಪರಿಶೀಲನಾ ಸಭೆಯಲ್ಲಿ ಗುರುವಾರ ಅಧಿಕಾರಿಗಳಿಂದ ಮಾಹಿತಿ ಪಡೆದು ಬಳಿಕ ಮಾತನಾಡಿದರು.

ಸೋಂಕಿತರನ್ನು ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ದಾಖಲು ಮಾಡದಿರುವ, ಸ್ಯಾಂಪಲ್‌ಗಳ ಪರೀಕ್ಷೆಯನ್ನು ಆಯಾ ದಿನವೇ ಸಿಗುವಂತೆ ನೋಡಿಕೊಳ್ಳದಿರುವುದೇ ಸೋಂಕು ತೀವ್ರಗತಿಯಲ್ಲಿ ಹರಡಲು ಕಾರಣವಾಗಿದೆ. ತಕ್ಷಣವೇ ಈ ಬಗ್ಗೆ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾಡಳಿತ ಬೇಡಿಕೆ ಇರಿಸಿರುವಂತೆ ಆಕ್ಸಿಜನ್‌ ಪ್ರಮಾಣ ಹೆಚ್ಚಿಸಲು, ವೈದ್ಯರ ಕೋರತೆ ನೀಗಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ಸಚಿವರು ಸಭೆಯಿಂದಲೇ ರಾಜ್ಯ ಮಟ್ಟದ ಅಧಿಕಾರಿಗೆ ದೂರವಾಣಿ ಕರೆ ಮಾಡಿ ಸೂಕ್ತ ಪ್ರಮಾಣದ ಆಕ್ಸಿಜನ್‌ ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಆದೇಶಿಸಿದರು.

ಜಿಲ್ಲೆಯಲ್ಲಿ ಹೋಮ್‌ ಐಸೋಲೇಶನ್‌ ವ್ಯವಸ್ಥೆಯಲ್ಲಿ ಗೊಂದಲಗಳಿಂದ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಆಗುತ್ತಿಲ್ಲ. ಹೀಗಾಗಿ ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ಆರಂಭಿಸಿ ರೋಗ ಲಕ್ಷಣ ಇಲ್ಲದವರನ್ನು ಕಡ್ಡಾಯವಾಗಿ ಈ ಕೇಂದ್ರಗಳಿಗೆ ಕರೆತರಬೇಕು. ಹಾಸ್ಟೆಲ್‌ಗಳು, ಶಾಲೆ – ಕಾಲೇಜು ಇತ್ಯಾದಿ ಸರಕಾರಿ ಕಟ್ಟಡಗಳಲ್ಲಿ ಈ ಕೇಂದ್ರಗಳನ್ನು ತೆರೆಯಬೇಕು ಎಂದು ಸೂಚನೆ ನೀಡಿದರು.

ಎಚ್ಚರತಪ್ಪಿದರೆ ಅನಾಹುತ

ಜಿಲ್ಲೆಯಲ್ಲಿ ಆರೋಗ್ಯ ವ್ಯವಸ್ಥೆ ಹೆಚ್ಚಿನ ಮಟ್ಟದಲ್ಲಿ ಇಲ್ಲದಿರುವುದರಿಂದ ಕೋವಿಡ್‌ ಆರೈಕೆ ಕೇಂದ್ರಗಳ ಕಡ್ಡಾಯ ಆರಂಭ ಆಗಲೇಬೇಕು. ಹೀಗಾಗಿ ಅತ್ಯಂತ ಹೆಚ್ಚು ಕಾಳಜಿಯಿಂದ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಬೂತ್‌ ಮಟ್ಟದಲ್ಲಿ ಅಥವಾ ಗ್ರಾಮ ಮಟ್ಟದಲ್ಲಿ ರಚಿಸಿರುವ ಟಾಸ್ಕ್‌ಫೋರ್ಸ್‌ಗಳು ಹೆಚ್ಚು ಕ್ರಿಯಾಶೀಲರಾಗಿ ಮನೆಯಲ್ಲಿರುವ ಎರಡೂವರೆ ಸಾವಿರ ಸೋಂಕಿತರನ್ನು ಕೂಡಲೇ ಕೋವಿಡ್‌ ಆರೈಕೆ ಕೇಂದ್ರಗಳಿಗೆ ಸ್ಥಳಾಂತರಿಸಬೇಕು ಎಂದು ತಾಕೀತು ಮಾಡಿದರು.

ದೇಶದ ಪ್ರತಿಷ್ಠಿತ ಸಂಸ್ಥೆ ನಡೆಸಿರುವ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏರುಗತಿಯಲ್ಲಿದ್ದ ಸೋಂಕು ಈಗ ಇಳಿಕೆ ಕಂಡಿದೆ. ಆದರೆ ಚಿತ್ರದುರ್ಗದಲ್ಲಿ ಮಾತ್ರ ಆ ಟ್ರೆಂಡ್‌ ಕಂಡುಬಂದಿಲ್ಲ. ಇದಕ್ಕೆ ಸರ್ಕಾರದ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲನೆ ಮಾಡುತ್ತಿಲ್ಲ ಎಂಬ ಸಂಶಯಗಳಿವೆ. ಈ ಪರಿಸ್ಥಿತಿ ಬದಲಾಗಬೇಕು ಎಂದು ಎಚ್ಚರಿಕೆ ನೀಡಿದರು.

dr sudhakar chitradurga saakshatvವರದಿ ಅದೇ ದಿನ ಕೊಡಬೇಕು
ಕೊರೋನಾ ಟೆಸ್ಟ್‌ಗಳ ಪರೀಕ್ಷಾ ವರದಿ ಆಯಾ ದಿನ ಬರುತ್ತಿಲ್ಲ ಎಂಬ ದೂರುಗಳಿವೆ. ಆಯಾ ದಿನದ ಫಲಿತಾಂಶವನ್ನು ಅದೇ ದಿನ ಸಿಗುವಂತೆ ಮಾಡಿ ಅವರನ್ನು ಐಸೋಲೇಟ್‌ ಮಾಡುವುದು, ಆರೈಕೆ ಮಾಡುವುದನ್ನು ಮಾಡಿದರೆ ನಿಯಂತ್ರಣ ಖಂಡಿತ ಸಾಧ್ಯವಿದೆ. ಆಕ್ಟಿವ್‌ ಪ್ರಕರಣಗಳಲ್ಲಿರುವ ಎಲ್ಲರಿಗೂ ಮೆಡಿಸನ್‌ ಕಿಟ್‌ ಕಡ್ಡಾಯವಾಗಿ ನೀಡಲೇಬೇಕು. ಔಷಧಗಳ ಕೊರತೆ ಇದ್ದರೆ ತಕ್ಷಣ ಬೇಡಿಕೆ ಸಲ್ಲಿಸಿದರೆ ಒದಗಿಸಲಾಗುವುದು. ಯಾವುದೇ ಕಾರಣಕ್ಕೂ ಸ್ಟಿರಾಯ್ಡ್‌ಗಳ ಬಳಕೆ ಮಾಡಲೇಬಾರದು. ಅನಿವಾರ್ಯ ಪ್ರಕರಣಗಳಿದ್ದಲ್ಲಿ ವೈದ್ಯರ ನಿಗಾ ವ್ಯವಸ್ಥೆಯಲ್ಲಿ ಮಾತ್ರ ಬಳಕೆ ಮಾಡಬೇಕು ಎಂದು ಸಲಹೆ ನೀಡದರು.

ಆಕ್ಸಿಜನ್‌ ಬಳಕೆಗೆ ಸಂಬಂಧಿಸಿದಂತೆ ಆಡಿಟ್‌ ಮಾಡಿಸಬೇಕು. ಇಲ್ಲವಾದಲ್ಲಿ ನಿರ್ದಿಷ್ಟ ಪ್ರಮಾಣದ ನಿರ್ದಿಷ್ಟ ಬಳಕೆ ಗೊತ್ತಾಗುವುದಿಲ್ಲ. ಅಗತ್ಯವಿದ್ದಲ್ಲಿ ಮಾತ್ರ ಬಳಕೆ ಮಾಡಬೇಕು, ಇಲ್ಲವಾದಲ್ಲಿ ರೋಗಿಗೆ ಅನುಕೂಲಕ್ಕಿಂತ ಅನಾನುಕೂಲ ಹೆಚ್ಚು. ಈ ಸಮಿತಿ ಪ್ರತಿ ತಾಲ್ಲೂಕಿನ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ವರದಿ ಸಿದ್ಧಪಡಿಸಬೇಕು. ಸದ್ಯ ಜಿಲ್ಲಾಡಳಿತದ ವರದಿ ಪ್ರಕಾರ ೫೯೧ ರೋಗಿಗಗಳಿಗೆ ಆಕ್ಸಿಜನ್‌ ನೀಡಲಾಗುತ್ತಿದೆ. ಸರ್ಕಾರ ೮.೫ ಕೆ.ಎಲ್‌ ಆಕ್ಸಿಜನ್‌ ಒದಗಿಸಲಾಗುತ್ತಿದೆ. ಅದರ ಗುಣಾತ್ಮಕ ಬಳಕೆ ಆಗಬೇಕು. ಹೆಚ್ಚುವರಿಯಾಗಿ ೪ ಕೆ.ಎಲ್‌ ನಿಂದ ೫ ಕೆಎಲ್‌ ವರೆಗೆ ನೀಡಲು ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ಹಾಸಿಗೆ ಸಂಖ್ಯೆ ಹೆಚ್ಚಿಸಿ
ಬಸವೇಶ್ವರ ಮೆಡಿಕಲ್‌ ಕಾಲೇಜು ಆಸ್ಪತ್ರೆಯಲ್ಲಿ ಶೇಕಡಾ ಎಪ್ಪತ್ತೈದರಷ್ಟು ಹಾಸಿಗೆಗಳನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಅದೇ ರೀತಿ ವೈದ್ಯರು ಮತ್ತು ಸಿಬ್ಬಂದಿಗಳನ್ನೂ ಸಂಸ್ಥೆ ಕೋವಿಡ್‌ ನಿಯಂತ್ರಣ ವಿಷಯದಲ್ಲಿ ಒದಗಿಸಬೇಕು. ಜತೆಗೆ ಐನೂರು ಹಾಸಿಗೆಗಳಿಗೆ ಆಕ್ಸಿಜನ್‌ ಲೈನ್‌ ಅಳವಡಿಕೆ ಮಾಡಬೇಕು. ಅದಕ್ಕೆ ಬೇಕಿರುವ ಎಲ್ಲಾ ನೆರವನ್ನೂ ಸರ್ಕಾರ ನೀಡಲಿದೆ ಎಂದು ಸ್ಪಷ್ಟಪಡಿಸಿದರು.

ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ಗೆ ನೋಂದಣಿ ಆಗದ ಖಾಸಗಿ ಆಸ್ಪತ್ರೆಗಳನ್ನು ತಕ್ಷಣ ನೋಂದಣಿ ಮಾಡಬೇಕು. ಮೂದು ದಿನದೊಳಗೆ ಈ ಪ್ರಕ್ರಿಯೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕು. ಜಿಲ್ಲಾ ಆಸ್ಪತ್ರೆಗೆ ಹಿರಿಯ ಅಧಿಕಾರಿಯೊಬ್ಬರನ್ನು ತಕ್ಷಣದಿಂದಲೇ ನೋಡಲ್‌ ಅಧಿಕಾರಿಯಾಗಿ ನೇಮಕ ಮಾಡಬೇಕು. ಅವರು ಪ್ರತಿಯೊಂದು ವಿಷಯದಲ್ಲೂ ಪ್ರತಿದಿನ ಪರಿಶೀಲನೆ ನಡೆಸಿ ಲೋಪಗಳ ನಿವಾರಣೆ ಮಾಡಬೇಕು ಎಂದು ಸೂಚನೆ ನೀಡಿದರು.

dr sudhakar saakshatv chitradurgaವಾರದೊಳಗೆ ನೇಮಕ

ಮೂವರು ವೈದ್ಯರು, ತಜ್ಞರು ೯ ಮತ್ತು ಜಿಲ್ಲಾ ಆಸ್ಪತ್ರೆಗೆ ೧ ಹುದ್ದೆ ಖಾಲಿ ಇವೆ. ಅವುಗಳನ್ನು ತಕ್ಷಣ ನೇಮಕ ಮಾಡಿ ಕಳುಹಿಸಲಾಗುವುದು. ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ವೈದ್ಯರಿಗೆ ಹೆಚ್ಚಿನ ವೇತನ ನೀಡಿ ಹೊಸದಾಗಿ ನೇಮಕ ಮಾಡಿಕೊಳ್ಳಬೇಕು. ಬಸವೇಶ್ವರ ಮೆಡಿಕಲ್‌ ಕಾಲೇಜಿನ ಪದವಿ ಪೂರ್ಣಗೊಳಿಸಿರುವವರು, ಪಿಜಿ ವಿದ್ಯಾರ್ಥಿಗಳನ್ನು ನಿಯೋಜಿಸಬೇಕು ಮತ್ತು ಅವರಿಗೂ ನಿಗದಿತ ಸಂಭಾವನೆ ನೀಡಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಕೋವಿಡ್‌ ಆಸ್ಪತ್ರೆಗೆ ರೋಗಿಗಳ ಸಂಬಂಧಿಕರನ್ನು ಯಾರನ್ನೂ ಒಳಗೆ ಬಿಡುವಂತಿಲ್ಲ. ಆಸ್ಪತ್ರೆಗೆ ಪೊಲೀಸ್‌ ಸಿಬ್ಬಂದಿ ನಿಯೋಜಿಸಬೇಕು. ರೆಮ್ಡಿಸ್ವೇರ್‌ ಹಾಗೂ ಇತರೆ ಔಷಧಗಳ ಬಳಕೆಗೆ ಸಂಬಂಧಿಸಿದಂತೆ ಸಮರ್ಪಕ ಮಾಹಿತಿ ಇಲ್ಲದ ಜಿಲ್ಲಾ ಆರೋಗ್ಯಾಧಿಕಾರಿ ಅವರನ್ನು ತರಾಟೆಗೆ ತೆಗೆದುಕೊಂಡ ಸಚಿವರು, ಪ್ರತಿದಿನ ಬೇಕಿರುವ ಔಷಧಗಳ ಎಲ್ಲಾ ವಿವರ ಅವರ ಬಳಿ ಇರಬೇಕು ಎಂದು ತಾಕೀತು ಮಾಡಿದರು.

ಸಭೆಯಲ್ಲಿ ಹಿರಿಯ ಶಾಸಕರಾದ ತಿಪ್ಪಾರೆಡ್ಡಿ, ಕೆಎಸ್‌ಆರ್‌ಟಿಸಿ ಅಧ್ಯಕ್ಷರಾದ ಚಂದ್ರಣ್ಣ, ಶಾಸಕಿ ಪೂರ್ಣಿಮಾ ಮತ್ತು ರಘುಮೂರ್ತಿ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು

Tags: #saakshatvbsy govtchitradurgacovid 19 guidelinesCOVID-19Dr. SudhakarkarnatakaMinister Sudhakar
ShareTweetSendShare
Join us on:

Related Posts

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

by Shwetha
August 4, 2026
0

ಮುಂಬೈ: ಬಾಲಿವುಡ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ಕನಸಿನ ಯೋಜನೆ ರಾಮಾಯಣ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದದ ಸುಳಿಗೆ ಸಿಲುಕಿದೆ. ಬರೋಬ್ಬರಿ...

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

by Shwetha
August 4, 2026
0

ಪಾಟ್ನಾ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷ ಬಿಹಾರ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದಿದೆ. ಬಿಜೆಪಿಯ ಅಭೇದ್ಯ ಕೋಟೆ ಎಂದೇ ಪರಿಗಣಿಸಲ್ಪಟ್ಟಿದ್ದ ಬಂಕಿಪುರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram