ಚಿತ್ರದುರ್ಗ | ರಸ್ತೆ ಅಪಘಾತ, ಇಬ್ಬರು ಸಾವು
ಚಿತ್ರದುರ್ಗ : ಪಾದಚಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
25 ವರ್ಷದ ಬೈಕ್ ಸವಾರ ಪವನ್, ಪಾದಚಾರಿ ಮುತ್ತಯ್ಯ ಮೃತ ದುರ್ದೈವಿಗಳಾಗಿದ್ದಾರೆ.
ರಾಯಾಪುರ ರಾಷ್ಟ್ರೀಯ ಹೆದ್ದಾರಿ-150 ಬಳಿ ಈ ಭೀಕರವಾದ ಅಪಘಾತ ಸಂಭವಿಸಿದೆ.
ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ತೀವ್ರ ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಮೊಳಕಾಲ್ಮೂರು ತಾಲೂಕಿನ ರಾಯಾಪುರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಮೃತ ದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.