ಚಿಟುಗು ಮಲ್ಲೇಶ್ವರ ಮಠದ ಸ್ವಾಮೀಜಿ ಅನುಮಾನಾಸ್ಪದ ಸಾವು….
ಚಿಟುಗು ಮಲ್ಲೇಶ್ವರ ಮಠದ ಜ್ಞಾನಭಾಸ್ಕರ ಸ್ವಾಮೀಜಿ ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
75 ವರ್ಷದ ಜ್ಞಾನಭಾಸ್ಕರ ಸ್ವಾಮೀಜಿ ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿನ ಚಿಟುಗು ಮಲ್ಲೇಶ್ವರ ಮಹಾಸಂಸ್ಥಾನ ಸ್ವಾಮೀಜಿ ಆಗಿದ್ದರು. ಸ್ನಾನ ಗೃಹದಲ್ಲಿ ಜ್ಞಾನ ಭಾಸ್ಕರ ಸ್ವಾಮೀಜಿ ನೀರು ಕಾಯಿಸುವ ವೇಳೆ ವಿದ್ಯುತ್ ಸ್ಪರ್ಶದಿಂದ ಐಕ್ಯರಾಗಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗುತ್ತಿದೆ. ಈ ಸಂಬಂಧ ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶ್ವಕರ್ಮ ಸಮಾಜದ 63 ಸ್ವಾಮಿಜಿಗಳ ಒಕ್ಕೂಟದಲ್ಲಿ ಇವರೂ ಒಬ್ಬರಾಗಿದ್ದರು. 30 ವರ್ಷಗಳ ಹಿಂದೆ ಸಂಸಾರ ತ್ಯಜಿಸಿ ಸನ್ಯಾಸತ್ವ ಸ್ವೀಕರಿಸಿದ್ದರು. ಇವರಿಗೆ ಪೂರ್ವಾಶ್ರಮದಲ್ಲಿ ಪತ್ನಿ, ಇಬ್ಬರು ಪುತ್ರರು ಮತ್ತು ಪುತ್ರಿ ಇದ್ದಾರೆ.