ಚಿಕ್ಕಮಗಳೂರು : ಮಲೆನಾಡಿನಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ಭೂ ಕುಸಿತವಾಗಿದೆ. ಈಗಾಗಲೇ ಮೂರು ಕಡೆಗಳಲ್ಲಿ ಆಗಿದ್ದ ಭೂ ಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿರುವಾಗಲೇ ಮತ್ತೊಂದು ಕಡೆ ಭೂ ಕುಸಿತವಾಗಿದ್ದು, ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಜಿಲ್ಲಾಡಳಿತ ಹರಸಾಹಸ ಪಡುತ್ತಿದೆ. ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತದಿಂದಾಗಿ ದಕ್ಷಿಣ ಕನ್ನಡ ಚಿಕ್ಕಮಗಳೂರು ಜಿಲ್ಲೆಯ ಸಂಪರ್ಕ ರಸ್ತೆ ಸಂಚಾರಕ್ಕೆ ಬಂದ್ ಆಗಿದೆ. ಚಾರ್ಮಾಡಿ ಘಾಟ್ ಅಲೇಖಾನ್ ಬಳಿ ಗುಡ್ಡ ಕುಸಿದಿದ್ದು, ಮತ್ತೆ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಇತ್ತ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಗಳು ಮಣ್ಣು ತೆರೆವು ಕಾರ್ಯದಲ್ಲಿ ತೊಡಗಿದ್ದಾರೆ. ಮಲೆನಾಡಲ್ಲಿ ಈಗಾಗಲೇ ಮಹಾಮಳೆಯಿಂದಾಗಿ ಪ್ರವಾಹದ ಆತಂಕ ಎದುರಾಗಿದೆ. ಇದರ ನಡುವೆ ಈಗಾಗಲೇ ಜಿಲ್ಲೆಯಲ್ಲಿ ವರುಣನ ಮುನಿಸಿನಿಂದ ಸಾಕಷ್ಟು ಅನಾಹುತಗಳು ಸಂಭವಿಸಿದ್ದು, ಹೀಗೆ ವರುಣ ನರ್ತನ ಮುಂದುವರೆದರೆ ಭಾರೀ ಪ್ರಮಾಣದ ಅಪಾಯಗಳು ಕಟ್ಟಿಟ್ಟ ಬುತ್ತಿಯೆನಿಸುವಂತಾಗಿದೆ. ಮತ್ತೆ ಕಳೆದ ಬಾರಿಯ ಪ್ರವಾಹದ ಭೀಕರತೆ ಮರುಕಳಿಸುವ ಸಾಧ್ಯತೆಯಿದ್ದು, ಮಳೆ ಅಬ್ಬರಕ್ಕೆ ಮಲೆನಾಡಡಿಗರು ಬೆಚ್ಚಿಬಿದ್ದಿದ್ದಾರೆ.
ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!
ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಇಡೀ ದೇಶವನ್ನೇ ಬೆರಗುಗೊಳಿಸಿದೆ. ಭದ್ರಕೋಟೆಯಂತಿದ್ದ ಡಿಎಂಕೆ ಪಕ್ಷವು ಹೀನಾಯ ಸೋಲನ್ನನುಭವಿಸಿ ಅಧಿಕಾರ ಕಳೆದುಕೊಂಡಿದ್ದರೂ, ಮಾಜಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್...








