ಥಾಣೆ : ದುರ್ಗಾ ಮಾತೆ ಮೂರ್ತಿ ಹೊತ್ತ ನವರಾತ್ರಿ ಮೆರವಣಿಗೆ ನಡೆಸುತ್ತಿದ್ದ ಸಂದರ್ಭದಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆದಿದೆ ಎನ್ನಲಾಗಿದೆ.
ಈ ಸಂಭ್ರಮಾಚರಣೆ ವೇಳೆ ಪಟಾಕಿ ಸಿಡಿದು ನಾಲ್ವರಿಗೆ ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ಕುರಿತು ಶ್ರೀನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನವರಾತ್ರಿ ಆಚರಣೆಯ ಅಂಗವಾಗಿ ಕೆಲವರು ಮೂರ್ತಿ ಮೆರವಣಿಗೆಯಲ್ಲಿ ಸಾಗಿದ್ದರು. ಅಲ್ಲದೇ, ಈ ಘಟನೆ ವೇಳೆ ಕಲ್ಲು ತೂರಾಟ ನಡೆದಿದ್ದು, ಇದಲ್ಲಿ ಒಬ್ಬ ವ್ಯಕ್ತಿಗೆ ಗಾಯಗಳಾಗಿವೆ ಎಂದು ಶ್ರೀನಗರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಎಫ್ಐಆರ್ ಅನ್ನು ಉಲ್ಲೇಖಿಸಿ ತಿಳಿಸಿದ್ದಾರೆ.
ಅಜಾಗರೂಕತೆಯಿಂದ ಪಟಾಕಿ ಸಿಡಿಸಿದ್ದರಿಂದ ಸುತ್ತಮುತ್ತಲಿನವರಿಗೆ ತಗುಲಿ ನಾಲ್ವರಿಗೆ ತೀವ್ರ ಸುಟ್ಟ ಗಾಯಗಳಾಗಿವೆ. ಜಗಳದ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದಿದ್ದು, ವ್ಯಕ್ತಿಯೊರು ಗಾಯಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 12 ಜನರ ವಿರುದ್ಧ ದೂರು ದಾಖಲಾಗಿದೆ.