ಉಡುಪಿಯಲ್ಲಿ ಜೆಸಿಬಿ ಘರ್ಜನೆ | ಅಕ್ರಮವಾಗಿ ಕಟ್ಟಿದ್ದ ಅಂಗಡಿಗಳ ತರೆವು
ಉಡುಪಿ: ಶನಿವಾರ ಬೆಳ್ಳಂಬೆಳಿಗ್ಗೆ ಉಡುಪಿಯಲ್ಲಿ ಅಕ್ರಮವಾಗಿ ಕಟ್ಟಿದ್ದ ಕಟ್ಟಡಗಳ ತೆರವು ಕಾರ್ಯಾಚರಣೆ ಪ್ರಾರಂಭವಾಗಿದೆ.
ನಗರಸಭೆ ಅಧಿಕಾರಿಗಳು ಜಾಮಿಯಾ ಮಸೀದಿ ಕಾಂಪ್ಲೆಕ್ಸ್ನಲ್ಲಿ ಅಕ್ರಮವಾಗಿ ಕಟ್ಟಿದ್ದ ಅಂಗಡಿಗಳ ತೆರವು ಕಾರ್ಯಾಚರಣೆ ಮಾಡುತ್ತಿದ್ದಾರೆ. ಅಲ್ಲದೇ ಹಿಜಾಬ್ ಹೋರಾಟದಲ್ಲಿ ವಿದ್ಯಾರ್ಥಿಗಳ ಬೆಂಬಲಕ್ಕೆ ನಿಂತಿದ್ದ ಎಸ್ಡಿಪಿಐ ಜಿಲ್ಲಾಧ್ಯಕ್ಷ ನಜೀರ್ ಅಹಮ್ಮದ್ ಝರಾ ನಿರ್ಮಿಸಿದ್ದ ಹೋಟೆಲನ್ನು ತೆರವು ಮಾಡಲಾಗುತ್ತಿದೆ.
ಇವರಿಗೆ ಈ ಮೊದಲೆ ಉಡುಪಿ ನಗರಸಭೆ ಹಲವು ಬಾರಿ ಹೋಟೆಲ್ಗೆ ನೋಟಿಸ್ ನೀಡಿತ್ತು. ನಗರಸಭೆಯ ಸಭೆಯಲ್ಲಿ ಸಮಗ್ರ ಚರ್ಚೆ ಬಳಿಕ ಇಂದು ನಗರಸಭೆ ಸಿಬ್ಬಂದಿ, ಪೌರಕಾರ್ಮಿಕರು ಅಂಗಡಿಗಳ ತೆರವು ಮಾಡುತ್ತಿದ್ದಾರೆ.