CM Basavaraja Bommai | ರಾಜ್ಯದಲ್ಲಿ ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳಕ್ಕೆ ನಿರ್ಧಾರ
ಬೆಂಗಳೂರು : ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸರ್ವಪಕ್ಷಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ನಾಗಮೋಹನ್ ದಾಸ್ ವರದಿ ಅನುಷ್ಠಾನಕ್ಕೆ ಸರ್ಕಾರ ಒಪ್ಪಿದೆ.
ನಾಳೆ ಸಂಪುಟ ಸಭೆ ಕರೆದು ಸರ್ಕಾರಿ ಮೀಸಲಾತಿ ಹೆಚ್ಚಳಕ್ಕೆ ಅಧಿಕೃತ ಆದೇಶದ ಮುದ್ರೆ ಹಾಕಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಶೇಕಡಾ 50ಕ್ಕೂ ಮೇಲೆ ಮೀಸಲಾತಿ ಕೊಡುತ್ತೇವೆ, EWS ಕೋಟಾ ಈಗಾಗಲೇ ಇದ್ದು, ಅದು ಸುಪ್ರೀಂ ಕೋರ್ಟ್ ನಲ್ಲಿದೆ. ಕೋರ್ಟ್ ಆದೇಶ ಬಂದ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತದೆ.
ಯಾವುದೇ ಜಾತಿಗೂ ಸಮಸ್ಯೆಆಗದಂತೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಸಿಎಂ ಭರವಸೆ ನೀಡಿದ್ದಾರೆ.

ನಾಗಮೋಹನ್ ದಾಸ್ ಸಮಿತಿಯ ಶಿಫಾರಸು ಏನು ?
ನಾಗಮೋಹನ್ ದಾಸ್ ಸಮಿತಿಯು ಎಸ್ ಸಿ ಮೀಸಲಾತಿಯನ್ನು ಶೇಕಡಾ 15 ರಿಂದ ಶೇಕಡಾ 17ಕ್ಕೆ, ಎಸ್ ಟಿ ಮೀಸಲಾತಿಯನ್ನು ಶೇಕಡಾ 3 ರಿಂದ 7ಕ್ಕೆ ಹೆಚ್ಚಿಸಲು ಶಿಫಾರಸು ಮಾಡಿದೆ.
ಒಂದು ವೇಳೆ ಈ ಶಿಫಾರಸು ಜಾರಿ ಮಾಡಿದರೆ ಮೀಸಲಾತಿ ಪ್ರಮಾಣವು ಒಟ್ಟಾರೆ ಶೇಕಡಾ 56ಕ್ಕೆ ಹೆಚ್ಚಳವಾಗುತ್ತದೆ.
ಆದ್ರೆ ಮೀಸಲಾಯಿಯನ್ನು ಶೇಕಡಾ 50ಕ್ಕಿಂತ ಹೆಚ್ಚಿಗೆ ನಿಗದಿಪಡಿಸಬಾರದು ಎಂದು ಸುಪ್ರಿಂ ಕೋರ್ಟ್ ಸೂಚನೆ ನೀಡಿದೆ.
ಅಂದಹಾಗೆ ವಿಧಾನಸಭೆ ಅಧಿವೇಶನದಲ್ಲಿ ಮೀಸಲಾತಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗಿತ್ತು.
ಆ ವೇಳೆ ಸಿಎಂ ಸರ್ವಪಕ್ಷಗಳ ಸಭೆ ನಡೆಸುವ ಭರವಸೆ ನೀಡಿದ್ದರು. ಅದರಂತೆ ಇಂದು ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ನಿವಾಸದಲ್ಲಿ ಸಭೆ ನಡೆಯಿತು.