Karnataka CM : ಸಂಪುಟ ವಿಸ್ತರಣೆ ಸಂಬಂಧ ನಡ್ಡಾ ಅವರನ್ನು ಭೇಟಿಯಾಗಲಿದ್ದೇನೆ : ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆಸಲಾದ ಸಭೆಯಲ್ಲಿ ಇಂದು ಅನೇಕ ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗಿದೆ… ಬಳಿಕ ಸಿಎಂ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಅಮಿತ್ ಶಾ ಅವರನ್ನು ಅಲ್ಪ ಸಮಯದಲ್ಲಿ ಭೇಟಿ ಮಾಡಿದ್ದೇನೆ. ಅಗ್ರೆಸ್ಸಿವ್ ಆಗಿ ಕೆಲಸ ಮಾಡುವಂತೆ ಹೇಳಿದ್ದಾರೆ.
ಬಜೆಟ್ ಮತ್ತು ಕೆಲಸ ವಿಚಾರದಲ್ಲಿ ಅಗ್ರೆಸ್ಸಿವ್ ಇರಲಿ ಎಂದಿದ್ದಾರೆ. ಸಂಪುಟ ವಿಸ್ತರಣೆ ಸಂಬಂಧ ನಡ್ಡಾ ಅವರನ್ನು ಭೇಟಿ ಮಾಡುವಂತೆ ಹೇಳಿದ್ದಾರೆ. ಇಂದು ನಡ್ಡಾ ಅವರನ್ನು ಭೇಟಿಯಾಗಲಿದ್ದನೆ. ನಡ್ಡಾ ಅವರನ್ನು ಮೇಲೆ ಗೊತ್ತಾಗಲಿದೆ. ಬಜೆಟ್ ನಲ್ಲಿ ಮಂಡನೆಯಾದ ಕೇಂದ್ರ ಸರ್ಕಾರದ ನದಿಜೋಡಣೆಗೆ ವಿಚಾರಕ್ಕೆ ಕರ್ನಾಟಕ ವಿರೋಧವಿದೆ ಎಂದಿದ್ದಾರೆ.
ಹೌದು ಗೋದಾವರಿ, ಕೃಷ್ಣಾ, ಪೆನ್ನಾರ್ ನದಿಜೋಡಣೆಗೆ ಸಿಎಂ ವಿರೋಧ. ಈ ಬಗ್ಗೆ ನಾವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೆವೆ. ಎಲ್ಲಿಯವರೆಗೆ ನಮ್ಮ ಪಾಲಿನ ನೀರಿನ ಬಗ್ಗೆ ಹಂಚಿಕೆ ಅಂತಿಮವಾಗುದಿಲ್ಲವೋ, ಅಲ್ಲಿಯವರೆಗೆ ನಮ್ಮ ವಿರೋಧವಿದೆ. ಈ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆಯೂ ಮಾತನಾಡಿದ್ದೆನೆ.
ಅದಕ್ಕೆ ಅವರು ಸಹ, ಎರಡು ರಾಜ್ಯಗಳು ಒಪ್ಪಿದರೆ ಮಾತ್ರ ಇದು ಸಾದ್ಯ ಎಂದಿದ್ದಾರೆ. ಇನ್ನೂ ತುಂಗಭದ್ರಾ ನದಿ ವಿಚಾರವಾಗಿ ನಮ್ಮ ಸಿಎಸ್ ಪತ್ರ ಬರೆಯಲಿದ್ದಾರೆ. ತೆಲಂಗಾಣ ಮತ್ತು ಆಂಧ್ರಪ್ರದೇಶದ ಸರ್ಕಾರಗಳಿಗೆ ಪತ್ರ ಬರೆಯಲಿದ್ದಾರೆ. ತುಂಗಭದ್ರಾದಲ್ಲಿ ಹೂಳು ಜಾಸ್ತಿ ಇದೆ. ಇದರಿಂದ ನೀರು ಸಂಗ್ರಹಣ ಕಡಿಮೆಯಾಗುತ್ತಿದೆ ಎಂದಿದ್ದಾರೆ.